ಗ್ರೀನ್ ಝೋನ್ ಗೆ ಬಂದಿದ್ದ ದಾವಣಗೆರೆ ಜನರಿಗೆ ಬಿಗ್ ಶಾಕ್; ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಕಳೆದ 28 ದಿನದಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗದ ಹಿನ್ನೆಲೆ ಗ್ರೀನ್ ಝೋನ್ ಗೆ ಶಿಫ್ಟ್ ಆಗಿದ್ದ ದಾವಣಗೆರೆಯಲ್ಲಿ ಇಂದು ಮತ್ತೊಂದು ಹೊಸ ಪ್ರಕರಣ ಪತ್ತೆಯಾಗಿದೆ.  ಈ ಮೂಲಕ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದೆ.

https://www.facebook.com/permalink.php?story_fbid=227290225364527&id=105586904201527

ನಗರದ ಭಾಷಾನಗರ ನಿವಾಸಿಯಾಗಿರುವ 35 ವರ್ಷದ  ನರ್ಸ್ ಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಳೆದೆರಡು ದಿನಗಳ ಹಿಂದೆ ನರ್ಸ್ ಅನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೊರೊನಾ ವೈರಸ್ ಪತ್ತೆಗಾಗಿ ಗಂಟಲು ದ್ರವನ್ನು ಶಿವಮೊಗ್ಗದ ಲ್ಯಾಬ್ ಕಳುಹಿಸಲಾಗಿತ್ತು. ಪುಣೆ ಲ್ಯಾಬ್ ನಲ್ಲಿಯೂ ಪಾಸಿಟಿವ್ ಬಂದಿದೆ.   ವರದಿಯಲ್ಲಿ ಭಾಷಾ ನಗರದ ನಿವಾಸಿಗೆ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

dc meeting

ಭಾಷಾನಗರ ಸೀಲ್ ಡೌನ್

ನಿನ್ನೆಯಷ್ಟೇ ದಾವಣಗೆರೆ  ಗ್ರೀನ್ ಝೋನ್ ಗೆ ಬಂದಿದ್ದರಿಂದ ಕೆಲವು ಷರತ್ತುಗಳನ್ನು ವಿಧಿಸಿ ಅಂಗಡಿ ಮುಗ್ಗಟು ತೆರೆಯಲು ಅವಕಾಶ ನೀಡಲಾಗಿತ್ತು. ಇದೀಗ ಭಾಷಾನಗರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದರಿಂದ ಭಾಷಾನಗರ, ಅಜಾದ್ ನಗರ, ಮಿಲತ್ ಕಾಲೋನಿ ಗಳನ್ನು ಜಿಲ್ಲಾಡಳಿತ  ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಒಂದು ಕಡೆ ಮಾತ್ರ ಒಳ ಹೋಗಲು ಮತ್ತು ಹೊರ ಬರಲು ಅವಕಾಶ ಕಲ್ಪಿಸಲಾಗುವುದು. ಇಲ್ಲಿನ ನಿವಾಸಿಗಳು ಯಾರು ಕೂಡ ಮನೆಯಿಂದ ಹೊರ ಬರುವಂತಿಲ್ಲ. ಇಡೀ ಪ್ರದೇಶವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿಸಿದರು.

ಭಾಷಾನಗರಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.   ಯಾರಿಂದ ವೈರಸ್ ಬಂದಿದೆ ಎಂಬುದು ಬಗ್ಗ ಇನ್ನಷ್ಟೇ ಪತ್ತೆಯಾಗಬೇಕಿದೆ.  ನರ್ಸ್ ಜೊತೆ ಪತಿ ಹಾಗೂ ಇಬ್ಬರು ಪುತ್ರ ವಾಸವಿದ್ದು, ಇಡೀ ಕುಟುಂಬವನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.  20 ಜನರ ಜೊತೆ  ಸಂಪರ್ಕ ಹೊಂದಿದ್ದ ಬಗ್ಗೆ ಮಾಹಿತಿ ಬಂದಿದೆ. ಏ23 ರಂದು ನರ್ಸ್ ಒಂದು ಹರಿಗೆಯನ್ನು  ಕೂಡ ಮಾಡಿಸಿದ್ದು,  ಆ ಮಹಿಳೆಯನ್ನು ಕೂಡ ಐಸೋಲೇಷನ್ ವಾರ್ಡ್ ನಲ್ಲಿ ಇಡಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಕರೆದಿದ್ದ ಸಭೆಯಲ್ಲಿಯೂ ಈ ನರ್ಸ್ ಭಾಗಿಯಾಗಿದ್ದರು ಎಂಬುದ ಬಗ್ಗೆ ಮಾಹಿತಿ ಇದೆ. ಹೀಗಾಗಿ ಅವರು ಯಾರ ಜೊತೆ ಸಂಪರ್ಕ ಹೊಂದಿದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *