Connect with us

Dvgsuddi Kannada | online news portal | Kannada news online

ಇಂದಿನಿಂದ ದಾವಣಗೆರೆಯಲ್ಲಿ ಸಾರ್ವಜನಿಕರಿಗೆ ಪೆಟ್ರೋಲ್ ಸಿಗಲ್ಲ..!

ಪ್ರಮುಖ ಸುದ್ದಿ

ಇಂದಿನಿಂದ ದಾವಣಗೆರೆಯಲ್ಲಿ ಸಾರ್ವಜನಿಕರಿಗೆ ಪೆಟ್ರೋಲ್ ಸಿಗಲ್ಲ..!

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಭೀತಿಯಿಂದ ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆ ದಾವಣಗೆರೆಯಲ್ಲಿ ಇಂದಿನಿಂದ ಪೆಟ್ರೋಲ್ ಬಂಕ್ ಬಂದ್ ಆಗಲಿವೆ.

ಅಗತ್ಯ ಸೇವೆ ನೀಡುವವರು, ವೈದ್ಯರು, ಮಾಧ್ಯಮದವರಿಗೆ ಹೊರತು ಪಡಿಸಿ, ಉಳಿದವರಿಗೆ ಪೆಟ್ರೋಲ್  ನೀಡದಂತೆ  ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲಾಡಳಿತ ನೀಡಿರುವ ಪಾಸ್ ತೋರಿಸಿದರೆ ಮಾತ್ರ ಪೆಟ್ರೋಲ್ ನೀಡಲು, ಬಂಕ್ ಮಾಲೀಕರಿಗೆ ಸೂಚಿಸಲಾಗಿದೆ.

ದಾವಣಗೆರೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಎರಡು ಪ್ರಕರಣಗಳು ಪತ್ತೆಯಾಗಿರುವುದರಿಂದ ಜಿಲ್ಲಾಡಳಿತ ಜಿಲ್ಲಾದ್ಯಂತ ಕಟ್ಟು‌ನಿಟ್ಟಿನ ಕ್ರಮ ಕೈಗೊಂಡಿದ್ದು, ಪೆಟ್ರೋಲ್ ಬಂಕ್ ಗಳನ್ನು ಬಂದ್ ಮಾಡುವಂತೆ ಆದೇಶಿಸಿದೆ. ಹೀಗಾಗಿ ಇಂದಿನಿಂದಲ್ಲೇ ಸಾರ್ವಜನಿಕರಿಗೆ ಪೆಟ್ರೋಲ್ ಸಿಗಲ್ಲ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top