ಡಿವಿಜಿ ಸುದ್ದಿ, ದಾವಣಗೆರೆ: ಏ.29 ರಂದು ಜಾಲಿನಗರ ನಿವಾಸಿ ವೃದ್ಧನಿಗೆ ಕೊರೊನಾ ಪಾಸಿಟಿವ್ ವರದಿಯಾಗಿದ್ದ ಹಿನ್ನೆಲೆ, ಅವರ ನಿವಾಸದ ಸುತ್ತಲಿನ 100 ಮೀಟರ್ ಸೀಲ್ ಡೌನ್ ಮಾಡಲಾಗಿದೆ. ಹಾಗೆಯೇ 5 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಲಾಗಿದ್ದು, ಈ ವಲಯಕ್ಕೆ ಕಮಾಂಡರ್ ಆಗಿ ದೂಡಾ ಆಯುಕ್ತ ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ.
ಈ ನಿಯಂತ್ರಣ ವಲಯಕ್ಕೆ ಸಂಬಂಧಿಸಿದಂತೆ ಪ್ರಾಧಿಕಾರದ ಕಚೇರಿಯ ದೂರವಾಣಿ ಸಂಖ್ಯೆ: 08192-221115 ಕರೆ ಮಾಡಿ ಸಮಸ್ಯೆ ತಿಳಿಸಬಹುದು. ಅಹವಾಲು ಸ್ವೀಕರಿಸಲು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ ಎಂದು ಘಟನಾ ಕಮಾಂಡರ್ ದೂಡಾ ಆಯುಕ್ತ ಕುಮಾರಸ್ವಾಮಿ ತಿಳಿಸಿದ್ದಾರೆ.



