ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ವಿರುದ್ಧದ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಿಗೆ ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ ಪರ್ಸನಲ್ ಪ್ರೊಟೆಕ್ಟಿವ್ ಇಕ್ವಿಪ್ಮೆಂಟ್ (ಪಿಪಿಇ ) ಕಿಟ್ ನೀಡಿದರು.

ಇಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಜಿಲ್ಲಾಸ್ಪತ್ರೆಯ ಚೀಫ್ ಸರ್ಜನ್ ನಾಗರಾಜ್ ಅವರಿಗೆ ಶಾಸಕರ ಮುಖಾಂತರ ಕಿಟ್ ಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್. ಹರೀಶ್ ಬಸಾಪುರ, ಕುರುಡಿ ಗಿರೀಶ್, ಡಾ. ಶಶಿಧರ್ ಉಪಸ್ಥಿತರಿದ್ದರು.



