Connect with us

Dvgsuddi Kannada | online news portal | Kannada news online

ದಾವಣಗೆರೆ: ಕೋವಿಡ್ -19 ಹಿನ್ನೆಲೆ 60 ವರ್ಷ ಮೇಲ್ಪಟ್ಟವರು ಆರ್ ಟಿಓ ಕಚೇರಿಗೆ ಬರುವಂತಿಲ್ಲ

ದಾವಣಗೆರೆ

ದಾವಣಗೆರೆ: ಕೋವಿಡ್ -19 ಹಿನ್ನೆಲೆ 60 ವರ್ಷ ಮೇಲ್ಪಟ್ಟವರು ಆರ್ ಟಿಓ ಕಚೇರಿಗೆ ಬರುವಂತಿಲ್ಲ

ಡಿವಿಜಿ ಸುದ್ದಿ, ದಾವಣಗೆರೆ : ಕೋವಿಡ್-19 ವೈರಾಣು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆದೇಶ ಹಿನ್ನೆಲೆ 60 ವರ್ಷ ಮೇಲ್ಪಟ್ಟವರು ಆರ್ ಟಿಓ ಕಚೇರಿಯ ಯಾವುದೇ ಕೆಲಸಗಳಿಗೆ ಬರುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ.

ಕಚೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ತಮ್ಮ ಕೆಲಸಗಳಿಗೆ ಆಗಮಿಸುತ್ತಿದ್ದಾರೆ. ಡಿ.ಎಲ್ ನವೀಕರಣ ಮತ್ತು ಡಿ.ಎಲ್ ಗೆ ಸಂಬಂಧಿಸಿದ ಇತರೆ ಕೆಲಸಗಳಿಗೆ ಸಂಬಂಧಿಸಿದಂತೆ ಡಿಜಿಟಲ್ ಸಹಿ ಮತ್ತು ಬಯೋಮೆಟ್ರಿಕ್ ಇರುವುದರಿಂದ ಸುರಕ್ಷತೆಯ ದೃಷ್ಟಿಯಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಡಿ.ಎಲ್ ಹಾಗೂ ಇತರೆ ಸೇವೆಗಳಿಗೆ ಹಾಜರಾಗದಂತೆ ತಿಳಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಜಿ.ಎಸ್.ಹೆಗಡೆ ತಿಳಿಸಿದ್ದಾರೆ.

ದಿನಾಂಕ: 01-02-2020 ರ ನಂತರ ಅವಧಿ ಮುಕ್ತಾಯಗೊಳ್ಳುವ ವಾಯಿದೆಯನ್ನು ಸಿಂಧುತ್ವ ಹೊಂದಿದ ಅವಧಿ ಎಂದು ಪರಿಗಣಿಸಿ ದಿ: 30-09-2020 ರವರೆಗೆ ವಿಸ್ತರಿಸಲಾಗಿರುತ್ತದೆ. (ಅರ್ಹತಾ ನವೀಕರಣ, ಪರವಾನಿಗೆ, ಎಲ್.ಎಲ್, ಡಿ.ಎಲ್, ನೋಂದಣಿ ವಾಹನಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಇತರೆ)

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top