ಡಿವಿಜಿ ಸುದ್ದಿ, ದಾವಣಗೆರೆ: ಬ್ಯಾಂಕ್ ಕಸ್ಟಮರ್ ಕೇರ್ ಅಧಿಕಾರಿ ಎಂದು ಹೇಳಿಕೊಂಡ ಅಪರಿಚಿತ ವ್ಯಕ್ತಿಯೊಬ್ಬ ಯರಗುಂಟೆ ಗ್ರಾಮದ ವ್ಯಕ್ತಿಗೆ 39,996 ರೂಪಾಯಿ ವಂಚನೆ ಮಾಡಿದ್ದಾನೆ.
ಜಿ.ಎಂ. ಮಹಾಸ್ವಾಮಿ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ವೃತ್ತಿಯಲ್ಲ ಸೇಲ್ಸ್ ಮ್ಯಾನ್ ಆಗಿದ್ದಾರೆ. ಮಹಾಸ್ವಾಮಿ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋಗಿದ್ದಾಗ ಹಣ ಕಡಿತಗೊಂಡಿರುವ ಬಗ್ಗೆ ಮೆಸೇಜ್ ಬಂದಿದೆ. ಆದರೆ ಹಣ ಬರಲಿಲ್ಲ. ಇದರಿಂದಾಗಿ ಕಸ್ಟಮರ್ ಕೇರ್ ನಂಬರ್ಗೆ ಫೋನ್ ಮಾಡಿದಾಗ ಆತ ಹಿಂದಿಯಲ್ಲಿ ಮಾತನಾಡಿ ಎಟಿಎಂ ಕಾರ್ಡ್ ವಿವರ ಪಡೆದು ವಂಚನೆ ಮಾಡಿದ್ದಾರೆ.
ಎಟಿಎಂ ಕಾರ್ಡ್ ವಿವರ ನೀಡಿದ ನಂತರ 4 ಬಾರಿ ಹಣ ಕಡಿತಗೊಂಡಿದೆ ಎಂದು ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ.



