Connect with us

Dvgsuddi Kannada | online news portal | Kannada news online

ದಾವಣಗೆರೆ : ವಿಕಲಚೇತನರು ಪಡಿತರ ಚೀಟಿಗೆ ಆಧಾರ್ ಸಂಖ್ಯೆ ನೋಂದಣೆ ಕಡ್ಡಾಯ

ದಾವಣಗೆರೆ

ದಾವಣಗೆರೆ : ವಿಕಲಚೇತನರು ಪಡಿತರ ಚೀಟಿಗೆ ಆಧಾರ್ ಸಂಖ್ಯೆ ನೋಂದಣೆ ಕಡ್ಡಾಯ

ಡಿವಿಜಿ ಸುದ್ದಿ, ದಾವಣಗೆರೆ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿರುವ ವಿಕಲಚೇತನರು ತಮ್ಮ ಆಧಾರ್ ಸಂಖ್ಯೆಯನ್ನು ಪಡಿತರ ಚೀಟಿಯೊಂದಿಗೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಮುಂದಿನ ದಿನಗಳಲ್ಲಿ ವಿಕಲಚೇತನರಿಗೆ ಹೆಚ್ಚಿನ ಪಡಿತರ ಅಕ್ಕಿಯನ್ನು ವಿತರಿಸುವ ಉದ್ದೇಶವಿರುತ್ತದೆ. ಆದ್ದರಿಂದ ಗ್ರಾಮೀಣ ಭಾಗದ ವಿಕಲಚೇತನರು ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳನ್ನು ಸಂಪರ್ಕಿಸಿ.

ತಮ್ಮ ಪಡಿತರ ಚೀಟಿ ಜೆರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂ.ಸಂ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top