Connect with us

Dvgsuddi Kannada | online news portal | Kannada news online

ದಾವಣಗೆರೆ: ಆ.5 ರಂದು ಶ್ರೀರಾಮಮಂದಿರದಲ್ಲಿ ವಿಶೇಷ ಅಭಿಷೇಕ

ದಾವಣಗೆರೆ

ದಾವಣಗೆರೆ: ಆ.5 ರಂದು ಶ್ರೀರಾಮಮಂದಿರದಲ್ಲಿ ವಿಶೇಷ ಅಭಿಷೇಕ

ಡಿವಿಜಿ ಸುದ್ದಿ, ದಾವಣಗೆರೆ:  ಅಯೋಧ್ಯೆಯಲ್ಲಿ ಆ.05 ರಂದು ರಾಮ ಮಂದಿರ  ಭೂಮಿ ಪೂಜೆ ನಡೆಯಲಿದೆ. ಈ ಕಾರ್ಯಕ್ರಮ ಯಶಸ್ವಿಗಾಗಿ ನಗರದ ಪಿ.ಜೆ ಬಡಾವಣೆಯಲ್ಲಿರುವ ಶ್ರೀ  ರಾಮಮಂದಿರದಲ್ಲಿ ಬೆಳಗ್ಗೆ 8 ಗಂಟೆಗೆ ವಿಶೇಷ ಅಭಿಷೇಕ ಹಮ್ಮಿಕೊಳ್ಳಲಾಗಿದೆ.ಈ ವೇಳೆ ರಾಮ ಭಕ್ತರು, ಹಿಂದೂ ಸಂಘಟನೆಯಿಂದ ಶ್ರೀ ರಾಮ ಮೂರ್ತಿಗೆ ಅಭಿಷೇಕ ನೆರವೇರಿಸಲಾಗುವುದು ಎಂದು ಹಿಂದೂ ಪರ ಸಂಘಟನೆ ಮುಖಂಡ ಯಶವಂತರಾವ್ ಜಾಧವ್ ಹೇಳಿದರು

.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಿ ಪೂಜೆಗೆ ಯಾವುದೇ ವಿಘ್ನ ಎದುರಾಗದಂತೆ ಅಭಿಷೇಕ ನಡೆಸಲಾಗುವುದು. ಇದೇ ವೇಳೆ ನಾಡಿಗೆ ಸೇವೆ ಸಲ್ಲಿಸಿದ ಜಗಜ್ಯೋತಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸಂಗೊಳ್ಳಿರಾಯಣ್ಣ , ಮದಕರಿ ನಾಯಕ ಹಾಗೂ ಛತ್ರಪತಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಶ್ರೀ ರಾಮಮೂರ್ತಿಗೆ ಪೂಜೆ ಸಲ್ಲಿಸಿ ಸಿಹಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀನಿವಾಸ್ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಿಸಿ ಮಹಾಬಲೇಶ್ , ಆನಂದರಾವ್ ಶಿಂಧೆ, ಶಿವಪ್ರಕಾಶ್ , ರಾಜು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top