Connect with us

Dvgsuddi Kannada | online news portal | Kannada news online

ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದ ದವನ್ ಕಾಲೇಜ್ ವಿದ್ಯಾರ್ಥಿಗಳು

ದಾವಣಗೆರೆ

ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದ ದವನ್ ಕಾಲೇಜ್ ವಿದ್ಯಾರ್ಥಿಗಳು

ಡಿವಿಜಿ ಸುದ್ದಿ, ದಾವಣಗೆರೆ: ನಗರದ ದವನ್ ಕಾಲೇಜಿನ ವಿದ್ಯಾರ್ಥಿಗಳು ಶಾಮನೂರು ಗ್ರಾಮದ ಬಸ್ ನಿಲ್ದಾಣದ ಮುಂಭಾಗದಲ್ಲಿ ಮೂಢನಂಬಿಕೆ ಕುರಿತು ಬೀದಿ ನಾಟಕ ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ಸ್ಫೂರ್ತಿ ಯೂತ್ ಫೆಸ್ಟ್ -2020 ಪ್ರಯುಕ್ತ ಕಾಲೇಜಿನ  ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹಿಂದಿನ ಕಾಲದಿಂದ ಆಚರಿಸಿಕೊಂಡು ಬರುತ್ತಿರುವ ಮೂಢ ನಂಬಿಕೆ ಇಂದಿಗೂ ಪ್ರಚಲಿತದಲ್ಲಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು  ಕಾರ್ಯಕ್ರಮ ಮುಖ್ಯ ಉದ್ದೇಶವಾಗಿದೆ.

ನಾಟಕ ಪ್ರದರ್ಶನ ತಂಡದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿಗಳಾದ ಎಸ್. ಎ. ಐಶ್ವರ್ಯ, ಚೈತ್ರ, ಕಿರಣ್ ಜೈನ್, ಪವನ್ ಕುಮಾರ್, ರಾಘವಿ ಎನ್.ಎಸ್, ಸಿಂಧು, ಸುಷ್ಮಾ, ತೇಜಸ್ವಿನಿ ಜಾಗೃತಿ ಮೂಡಿಸಿದರು. ಮಾರ್ಗದರ್ಶಕರಾಗಿ ಆರ್.ವೈ ಶಿಲ್ಪ, ಎನ್.ಸಿ. ರೂಪ, ಅರುಣ್ ಚೌವ್ಹಾಣ್, ಎನ್. ಅನಿತಾ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top