Connect with us

Dvgsuddi Kannada | online news portal | Kannada news online

ಪಾಲಿಕೆ ಮೇಯರ್ ವಿತರಿಸಿರುವ ಪಾಸ್‍ಗಳು ಅಸಿಂಧು : ಜಿಲ್ಲಾಧಿಕಾರಿ

ಪ್ರಮುಖ ಸುದ್ದಿ

ಪಾಲಿಕೆ ಮೇಯರ್ ವಿತರಿಸಿರುವ ಪಾಸ್‍ಗಳು ಅಸಿಂಧು : ಜಿಲ್ಲಾಧಿಕಾರಿ

ಡಿವಿಜಿ ಸುದ್ದಿ, ದಾವಣಗೆರೆ : ಲಾಕ್‍ಡೌನ್ ಹಿನ್ನೆಲೆ ಪಾಲಿಕೆ ಮೇಯರ್‍ರವರು ವಿತರಿಸಿರುವ ಅಸಿಂಧುವಾಗಿದ್ದು, ಮೇಯರ್‍ರಿಂದ ಪಡೆದ ಪಾಸ್‍ಗಳನ್ನು ಬಳಕೆ ಮಾಡುವಂತಿಲ್ಲ. ತಕ್ಷಣ ಈ ಪಾಸ್‍ಗಳನ್ನು ವಾಪಸ್ ನೀಡಬೇಕು. ಒಂದು ವೇಳೆ ಬಳಕೆ ಮಾಡಿದಲ್ಲಿ ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಮೇಯರ್‍ರವರು ಪಾಸ್ ನೀಡಿರುವ ಬಗ್ಗೆ ತಿಳಿದುಬಂದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳು ಮೇಯರ್ ಬಿ.ಜಿ.ಅಜಯ್‍ಕುಮಾರ್‍ರವರನ್ನು ಜಿಲ್ಲಾಡಳಿತ ಕಚೇರಿಗೆ ಕರೆಯಿಸಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಸಿದಾಗ, ಮೇಯರ್‍ ಜಿಲ್ಲಾಡಳಿತಕ್ಕೆ ಪಾಸ್ ಕೇಳಿದ್ದರು. ಆಗ ಖಾಲಿಯಾಗಿದೆ ಎಂದು ತಿಳಿಸಲಾಗಿತ್ತು. ಮೇಯರ್, ತಾವೇ ಸ್ವತಃ ಪಾಸ್‍ಗಳನ್ನು ಮುದ್ರಿಸಿ ನೀಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಇನ್ನು ಮುಂದೆ ಈ ರೀತಿ . ಉಳಿದ ಪಾಸ್‍ಗಳನ್ನು ವಾಪಸ್ ನೀಡುತ್ತೇವೆ. ಹಾಗೂ ಇಂತಹ ಘಟನೆ ಮತ್ತೊಮ್ಮೆ ಮರುಕಳಿಸದಂತೆ ನೋಡಿಕೊಳ್ಳುತ್ತೇನೆಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳು, ಮೇಯರ್‍ರವರು ನೀಡಿರುವ ಪಾಸ್‍ಗಳನ್ನು ಸಾರ್ವಜನಿಕರು ಬಳಸುವುದು ಕಂಡುಬಂದಲ್ಲಿ ಅಂತಹವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸೂಕ್ತ ಕ್ರಮ ಶಿಕ್ಷೆಗೆ ಗುರಿಪಡಿಸಲಾಗುವುದು. ಪಾಸ್ ಪಡೆದವರು ಮರಳಿ ಮೇಯರ್ ಕಚೇರಿಗೆ ಪಾಸ್‍ಗಳನ್ನು ನೀಡಬೇಕು. ಈ ಪಾಸ್ ಬಳಸುವವರು ಕಂಡುಬಂದಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಲಾಗಿದ್ದು ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಅವಶ್ಯಕ ಸೇವೆಗಳಿಗೆ ಪಾಸ್ ಅವಶ್ಯವಿದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ನೇರವಾಗಿ ಸಂಪರ್ಕಿಸಿ ಪಡೆಯಬೇಕು. ಬೇರೆಯವರಿಂದ ಪಡೆದ ಪಾಸ್‍ಗಳು ಸಿಂಧುವಲ್ಲ ಎಂದು ಸ್ಪಷ್ಟೀಕರಿಸುತ್ತೇನೆಂದು ತಿಳಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top