Connect with us

Dvgsuddi Kannada | online news portal | Kannada news online

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ 100 ಐಸೋಲೇಷನ್ ವಾರ್ಡ್ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಪ್ರಮುಖ ಸುದ್ದಿ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ 100 ಐಸೋಲೇಷನ್ ವಾರ್ಡ್ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲಾಸ್ಪತ್ರೆಯಲ್ಲಿ 100 ಐಸೋಲೇಷನ್ ವಾರ್ಡ್ ಗಳ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚಿಸಿದರು.

ಕೋವಿಡ್-19 ನಿಯಂತ್ರಣ ಹಿನ್ನೆಲೆಯಲ್ಲಿ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಈಗಾಗಲೇ ಖಚಿತಪಟ್ಟ ಮೂರು ಪ್ರಕರಣದಲ್ಲಿ ಮೂವರೂ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಕ್ರಮ ಕೈಗೊಳ್ಳಲು ವೈದ್ಯರಿಗೆ ಸಲಹೆ ಸೂಚನೆಗಳನ್ನು ನೀಡಿ ವೈದ್ಯರಿಂದ ಕೋವಿಡ್ ಕುರಿತು ಮಾಹಿತಿ ಪಡೆದರು.
ಜಿಲ್ಲಾ ಆಸ್ಪತ್ರೆಯಲ್ಲಿರುವ ಐಸೋಲೇಷನ್ ವಾರ್ಡ್‍ನ್ನು 100 ಬೆಡ್‍ಗಳ ವಾರ್ಡ್‍ಗಳಾಗಿ ಸಿದ್ಧಪಡಿಸಿಕೊಳ್ಳಬೇಕು. ಕಾಮಗಾರಿಗೆ ಸಂಬಂಧಿಸಿದಂತೆ ಎಷ್ಟೇ ಅನುದಾನ ಬೇಕಿದ್ದರೂ ಕೇಳಿ ಎಂದರು. ಜೊತೆಗೆ ಪ್ರತಿ ತಾಲ್ಲೂಕುಗಳಲ್ಲಿ ಐಸೊಲೇಷನ್ ವಾರ್ಡ್‍ಗಳಲ್ಲಿ ಅಗತ್ಯಕ್ಕಿಂತ ಹೆಚ್ಚುವರಿ ಬೆಡ್‍ಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ವೈದ್ಯರಿಗೆ ಸೂಚಿಸಿದ ಅವರು, ಆಸ್ಪತ್ರೆಯಲ್ಲಿ ಸ್ಯಾನಿಟೈಸರ್ ಫ್ಯಾನ್ ತಯಾರಿಸಲಾಗಿದೆ. ಜಿಲ್ಲೆಯಲ್ಲಿ ಇದೊಂದು ಹೊಸ ಅನ್ವೇಷಣೆಯಾಗಿದೆ ಎಂದು ಶ್ಲಾಘಿಸಿದರು.

dc cg Hospital visit

ಬಳಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ಕೇಂದ್ರ, ಪ್ರಯೋಗಾಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿನ ರೋಗಿಗಳನ್ನು ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಅಲ್ಲಿನ ಸಿಬ್ಬಂದಿಗಳಿಗೆ ಸೂಚಿಸಿದರು. ಹಾಗೂ ಕೋವಿಡ್ -19ರ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೊನಾ ಸೈನಿಕರು ನೀವು ಎಂದು ವೈದ್ಯಕೀಯ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರ ಸಮ್ಮುಖದಲ್ಲಿ ಮಾಧ್ಯಮ ವರದಿಗಾರರಿಗೆ ಕೋವಿಡ್-19 ಪರೀಕ್ಷೆ ತಪಾಸಣೆ ನಡೆಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಡಾ.ಶಶಿಧರ್ ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top