Connect with us

Dvgsuddi Kannada | online news portal | Kannada news online

 ಡಿ.28,29 ರಂದು ಪರಂಪರೆ ರಕ್ಷಣೆ ಧರ್ಮ ಸಮಾರಂಭ

ದಾವಣಗೆರೆ

 ಡಿ.28,29 ರಂದು ಪರಂಪರೆ ರಕ್ಷಣೆ ಧರ್ಮ ಸಮಾರಂಭ

ಡಿವಿಜಿ ಸುದ್ದಿ, ದಾವಣಗೆರೆ: ನಗರದ ತ್ರಿಶೂಲ್ ಕಲಾ ಭವನದಲ್ಲಿ ಡಿ. 28 , 29 ರಂದು ಶ್ರೀ ಹಿಮವತ್ಕೇದಾರ ಭೀಮಾಶಂಕರಲಿಂಗ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ `ಪರಂಪರೆ ರಕ್ಷಣೆ ಧರ್ಮ ಸಮಾರಂಭ ಹಾಗೂ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ’ ಕಾರ್ಯಕ್ರಮ ನಡೆಯಲಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಂ. ಸುರೇಶ್, ಬೀದರ್ ನ ಹಿರೇಮಠದ ಶ್ರೀ ಷ.ಬ್ರ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ‘ಧರ್ಮಧ್ವಜ ಮತ್ತು ಮೌಲ್ಯಗಳು’ ಕುರಿತು ಉಪನ್ಯಾಸ ನೀಡಲಿದ್ದಾರೆ. ಯಡೆಯೂರು ಮಠದ ಶ್ರೀ ಷ.ಬ್ರ. ರೇಣುಕಾ ಶಿವಾಚಾರ್ಯ ಸ್ವಾಮೀಜಿ ಅವರಿಂದ ಉಪದೇಶಾಮೃತವಿದೆ. ರಾಘಟ್ಟದ ಶ್ರೀ ಷ.ಬ್ರ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ, ನೆಗಳೂರುಶ್ರೀ ಷ.ಬ್ರ ಗುರುಶಾಂತ ಶಿವಾಚಾರ್ಯ ಸ್ವಾಮೀಜಿ, ಕಣ್ವಕುಪ್ಪೆ ಗವಿಮಠದ ಶ್ರೀ ಷ.ಬ್ರ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯವಹಿಸಿಕೊಳ್ಳಲಿದ್ದಾರೆ.

ಕಾರ್ಯಕ್ರಮವನ್ನು ಕೇಂದ್ರ ಸಚಿವ ಸುರೇಶ್ ಅಂಗಡಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಮಹಾ ಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ, ಸಿ.ಎಂ. ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕ ಎಸ್.ಎ. ರವೀಂದ್ರನಾಥ್ , ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ. ಎಚ್. ಶಿವಯೋಗಿಸ್ವಾಮಿ, ಶಾಸಕ  ಎಸ್.ವಿ ರಾಮಚಂದ್ರಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಾಜಿ ಶಾಸಕ ಕೆ. ಮಲ್ಲಪ್ಪ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಅಜ್ಜಂಪುರ ಶೆಟ್ರು ಮೃತ್ಯುಂಜಯ ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top