ದಾವಣಗೆರೆ: ರಂಜಾನ್ ಸಾಮೂಹಿಕ ಪ್ರಾರ್ಥನೆ ನಿರ್ಬಂಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಮೇ 31 ವರೆಗೆ ದೇಶದಲ್ಲಿ ಲಾಕ್‍ಡೌನ್ ಹಿನ್ನೆಲೆ ಕೇಂದ್ರ ಗೃಹ ಇಲಾಖೆಯು ಹೊರಡಿಸಿರುವ ಆದೇಶದನ್ವಯ ಕರ್ನಾಟಕ ರಾಜ್ಯ ಔಖಾಫ್ ಮಂಡಳಿ, ಬೆಂಗಳೂರು ಇವರು ರಾಜ್ಯದ ಎಲ್ಲಾ ಮಸೀದಿ/ದರ್ಗಾ/ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ (ನಮಾಜ್) ನಿರ್ಬಂಧಿಸಿದೆ.

ಮಾರ್ಗಸೂಚಿಗಳು: ಕೋವಿಡ್-19 ವೈರಸ್ ಹರಡುವ ಸಾಧ್ಯತೆ ಇರುವುದರಿಂದ ರಂಜಾನ್ ದಿನಗಳಂದು ಸಹ ಸಾಮೂಹಿಕ ಪ್ರಾರ್ಥನೆಗೆ ಮಸೀದಿ/ದರ್ಗಾ/ಈದ್ಗಾಗಳಲ್ಲಿ ನಿರ್ಬಂಧಿಸಲಾಗಿರುತ್ತದೆ.

• ಈದ್-ಉಲ್-ಫಿತ್ರ್ ಹಬ್ಬದ ದಿನದಂದು ಯಾರೂ ಸಹ ಮನೆಗಳಿಂದ ಹೊರಬಾರದೇ ಸಾಮಾಜಿಕ ಅಂತರ ಕಾಯ್ದುಕೊಳ್ಳತಕ್ಕದ್ದು ಹಾಗೂ ಯಾವುದೇ ಈದ್ ಮಿಲಾನ್ ಸಮಾರಂಭಗಳು ಏರ್ಪಡಿಸತಕ್ಕದಲ್ಲ.

• ಈದ್-ಉಲ್-ಫಿತ್ರ್ ಹಬ್ಬದಂದು ಕಂಟೇನ್‍ಮೆಂಟ್ ಏರಿಯಾ/ಹೈರಿಸ್ಕ್ ಏರಿಯಾ/ವಿದೇಶದ ಪ್ರವಾಸ ಹೊಂದಿರುವವರ ಸ್ನೇಹಿತರು ಹಾಗೂ ಬಂಧುಗಳೊಂದಿಗೆ ಹಸ್ತಲಾಘವ ಹಾಗೂ ಭೇಟಿಯಾಗುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿರುತ್ತದೆ.

ಈ ಹಿಂದೆಯೂ ಜಾರಿಯಾದಂತಹ ಮಂಡಳಿಯ ಹಾಗೂ ಜಿಲ್ಲಾಡಳಿತದ ಸೂಚನೆ ಹಾಗೂ ನಿರ್ದೇಶನಗಳನ್ನು ದಾವಣಗೆರೆ ಜಿಲ್ಲೆಯ ಮುಸ್ಲಿಂ ಬಾಂಧವರು ಹಾಗೂ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು/ಆಡಳಿತಾಧಿಕಾರಿಗಳು ತಪ್ಪದೇ ಪಾಲಿಸಬೇಕೆಂದು ಆದೇಶಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಸಿರಾಜ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *