Connect with us

Dvgsuddi Kannada | online news portal | Kannada news online

5 ಕೋಟಿ ವೆಚ್ಚದಲ್ಲಿ  ಗ್ಲಾಸ್ ಹೌಸ್ ಅಭಿವೃದ್ಧಿ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್

ಪ್ರಮುಖ ಸುದ್ದಿ

5 ಕೋಟಿ ವೆಚ್ಚದಲ್ಲಿ  ಗ್ಲಾಸ್ ಹೌಸ್ ಅಭಿವೃದ್ಧಿ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್

ಡಿವಿಜಿ ಸುದ್ದಿ, ದಾವಣಗೆರೆ:  ಗ್ಲಾಸ್‍ಹೌಸ್‍ಗೆ  ಮಂಜೂರಾಗಿರುವ ರೂ.5 ಕೋಟಿ ವೆಚ್ಚದಲ್ಲಿ  ಉದ್ಯಾನವನ ಅಭಿವೃದ್ಧಿ ಮತ್ತು  ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಹೆಚ್ಚೆಚ್ಚು ಪ್ರವಾಸಿಗರು ಗಾಜಿನ ಮನೆಯತ್ತ ಆಕರ್ಷಿತರಾಗುವಂತೆ ಮಾಡಬೇಕೆಂದು ಎಂದು ಸೂಚಿಸಿದರು.

ಇಂದು ಬೆಳಿಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಕುಂದುವಾಡ ಕೆರೆ, ಗ್ಲಾಸ್ ಹೌಸ್ ಹಾಗೂ ಪಾರ್ಕ್ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕುಂದುವಾಡ ಕೆರೆಯ ಮುಖ್ಯ ದ್ವಾರದ ಬಳಿ ರಾಜಾ ಕಾಲುವೆಗೆ ನಿರ್ಮಿಸುತ್ತಿರುವ  ಬ್ರಿಡ್ಜ್  ಕಾಮಗಾರಿ ವೀಕ್ಷಿಸಿದರು.  ಶೀಘ್ರವೇ ಕಾಮಗಾರಿ ಮುಗಿಸುವಂತೆ ಹಾಗೂ ಕುಂದುವಾಡ ಕೆರೆ ಆವರಣದಲ್ಲಿ ಸಾಕಷ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರು.

kundavada kere

ನಂತರ ಎಂಸಿಸಿ ಬಿ ಬ್ಲಾಕ್‍ಓ ಹಿರಿಯ ನಾಗರೀಕರ ಪಾರ್ಕ್‍ಗೆ ಭೇಟಿ ನೀಡಿ, ನಾಗರೀಕರೊಂದಿಗೆ ಸಂವಾದ ನಡೆಸಿ, ಪಾರ್ಕ್‍ನಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ಪೌರ ಕಾರ್ಮಿಕರಿಗೆ ಸೂಚಿಸಿದರು. ಹಾಗೂ ಪೌರಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿ ತಮ್ಮ ಕೆಲಸಕ್ಕೆ ಅಗತ್ಯವಾದ ನೆರವನ್ನು ನೀಡಲಾಗುವುದು ಎಂದರು.

ಬೂದಾಳು ರಸ್ತೆಯ ಪೌರ ಕಾರ್ಮಿಕರ ವಸತಿಗೃಹ ಕಾಲೋನಿಗೆ ಭೇಟಿ ನೀಡಿ, ನಿರ್ಮಾಣ ಹಂತದಲ್ಲಿರುವ ವಸತಿಗೃಹಗಳ ಕಾಮಗಾರಿಯನ್ನು ವೀಕ್ಷಿಸಿ, ತ್ವರಿತ ಗತಿಯಲ್ಲಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು. ನಂತರ ಕೊಳಚೆ ನೀರು ಶುದ್ದೀಕರಣ ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪಾಲಿಕೆ ಮೇಯರ್ ಬಿ.ಜಿ.ಅಜಯಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯೆ ರೇಖಾ ಸುರೇಶ್, ಎಸ್ಪಿ ಹನುಮಂತರಾಯ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಸ್ಮಾರ್ಟ್‍ಸಿಟಿ ಎಂ.ಡಿ. ರವೀಂದ್ರ ಮಲ್ಲಾಪುರ ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top