Connect with us

Dvgsuddi Kannada | online news portal | Kannada news online

ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ; ಸರ್ಕಾರವೇ  ಶಿಷ್ಯವೇತನ ನೀಡಲಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ

ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ; ಸರ್ಕಾರವೇ  ಶಿಷ್ಯವೇತನ ನೀಡಲಿ: ಶಾಮನೂರು ಶಿವಶಂಕರಪ್ಪ

ಡಿವಿಜಿ ಸುದ್ದಿ, ದಾವಣಗೆರೆ: ಕಾಲೇಜ್ ಆಡಳಿತ ಮಂಡಳಿಯಿಂದ ವೈದ್ಯ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲು ಸಾಧ್ಯವಿಲ್ಲ. ಸರ್ಕಾರವೇ ಶಿಷ್ಯ ವೇತನ ನೀಡಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ನಗರ ಜೆಜೆಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು  16 ತಿಂಗಳ  ಶಿಷ್ಯ ವೇತನಕ್ಕೆ ಆಗ್ರಹಿಸಿ ಕಳೆದ 10 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರು.  ಇಂದು ಜೆಜೆಎಂ ಮೆಡಿಕಲ್  ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿಯೂ ಆಗಿರುವ  ಶಾಸಕ ಶಾಮನೂರು ಶಿವಶಂಕರಪ್ಪ  ಅವರನ್ನು ಭೇಟಿ ಮಾಡಿ ಶಿಷ್ಯ ವೇತನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

jjm davangere

ಈ ಬಗ್ಗೆ  ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಿದ  ಶಾಮನೂರು ಶಿವಶಂಕರಪ್ಪ ಅವರು,  ಶಿಷ್ಯ ವೇತನಕ್ಕೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಹೀಗಾಗಿ ಸರ್ಕಾರದಿಂದ  ಪರಿಹಾರ ಸಿಗುವವರೆಗೂ ಪ್ರತಿಭಟನೆ ನಡೆಸಿ  ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

shamnuru yeddiyurappa

ಒಂದೆಡೆ ಸರ್ಕಾರ ಆಡಳಿತ ಮಂಡಳಿಯೇ ಶಿಷ್ಯವೇತನ ನೀಡಬೇಕು ಎಂದು ಹೇಳುತ್ತಿದೆ.  ಇತ್ತೊಂದೆಡೆ ಆಡಳಿತ ಮಂಡಳಿ , ಸರ್ಕಾರವೇ ಶಿಷ್ಯ ವೇತನ ನೀಡಬೇಕು ಎಂದು ಹೇಳುತ್ತಿದೆ. ಇದರಲ್ಲಿ ಯಾರ ಮಾತು ನಂಬಬೇಕು. ಕಳೆದ 16 ತಿಂಗಳಿಂದ ಶಿಷ್ಯ ವೃತನ ಇಲ್ಲದೆ ಪರದಾಡುತ್ತಿದ್ದೇವೆ. ಜನಪ್ರತಿನಿಧಿಗಳ ಈ  ರೀತಿಯ ಹೇಳಿಕೆ ಬೇಸರ ಮೂಡಿಸಿದೆ. ಆಡಳಿತ ಮಂಡಳಿ ಮತ್ತು ಸರ್ಕಾರದ ನಡುವಿನ ತಿಕ್ಕಾಟದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬಲಿಯಾಗಿದ್ದೇವೆ  ಎಂದು ಪ್ರತಿಭಟನಾ ನಿರತ ವೈದ್ಯ ಡಾ. ಹರೀಶ್ ಆಕ್ರೋಶ ವ್ಯಕ್ತಪಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top