ಬಡವರಿಗೆ ಆಹಾರ ಕಿಟ್ ವಿತರಿಸಿದ ಪಾಲಿಕೆ ಸದಸ್ಯ ಗಡಿ ಗುಡಾಳ್ ಮಂಜುನಾಥ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ದಾವಣಗೆರೆ: ನಗರದ  ಬಡಕುಟುಂಬಗಳಿಗೆ ವೈಯಕ್ತಿಕವಾಗಿ ಆಹಾರ ಕಿಟ್ ಗಳನ್ನು  ಪಾಲಿಕೆ ಸದಸ್ಯ ಗಡಿ ಗುಡಾಳ್ ಮಂಜುನಾಥ್ ಹಂಚಿದರು.

ಮಹಾನಗರಪಾಲಿಕೆಯ 38 ನೇ ವಾರ್ಡ್ ಸದಸ್ಯರಾದ ಗಡಿ ಗುಡಾಳ್ ಮಂಜುನಾಥ್ ಇಂದು ಮೂರನೇ ಬಾರಿಗೆ ತಮ್ಮ ವಾರ್ಡ್ ನಲ್ಲಿ ಇರುವ ಬಡಕುಟುಂಬಗಳಿಗೆ ಧವಸಧಾನ್ಯದ ಕಿಟ್ ವಿತರಣೆ ಮಾಡಿದರು.

ಪಾಲಿಕೆಯಿಂದ ಬಂದ ಕಿಟ್ ಗಳನ್ನು ಅಗತ್ಯವಿರುವ ಬೇರೆ ವಾರ್ಡ್ ಗಳಿಗೆ ನೀಡಿ, ತಮ್ಮ ವಾರ್ಡ್ ನಲ್ಲಿ ಕಿಟ್ ಅವಶ್ಯಕತೆಯಿರುವ ಬಡಕುಟುಂಬಗಳಿಗೆ ವೈಯಕ್ತಿಕವಾಗಿ ಕಿಟ್ ಮಾಡಿಸಿ ಹಂಚಿದ್ದು ವಿಶೇಷವಾಗಿತ್ತು.

gadi gudal manju 2

ಅಕ್ಕಿ, ಸಕ್ಕರೆ, ಬೇಳೆ, ಗೋಧಿಹಿಟ್ಟು, ರಾಗಿಹಿಟ್ಟು , ಅಡುಗೆ ಎಣ್ಣೆ, ಸಾಂಬಾರ್ ಪುಡಿ, ಖಾರದಪುಡಿ, ಪುಳಿಯೋಗರೆ, ಮತ್ತೆ ರವೆ ಒಳಗೊಂಡ ಕಿಟ್ ವಿತರಿಸುವ ಸಂದರ್ಭದಲ್ಲಿ ಮುಖಂಡರಾದ ಆಲೂರು ಜ್ಯೋತಿರ್ಲಿಂಗ, ಕಾಂಗ್ರೆಸ್ ಮುಖಂಡ ಪ್ರಮೋದ್ ಕೆ.ವಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಲ್. ಬಿ. ಬೈರೇಶ, ಪ್ರಜ್ವಲ್, ನಿಖಿಲ್, ಮನು, ನೀಲಕಂಠಪ್ಪ, ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್.ಹರೀಶ್ ಬಸಾಪುರ  ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *