Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧ ; ಜಿಲ್ಲಾಧಿಕಾರಿ ಆದೇಶ

ದಾವಣಗೆರೆ

ದಾವಣಗೆರೆ: ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧ ; ಜಿಲ್ಲಾಧಿಕಾರಿ ಆದೇಶ

ಡಿವಿಜಿ ಸುದ್ದಿ, ದಾವಣಗೆರೆಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆ  ಆ. 21 ಹಾಗೂ 22ರಂದು ಗೌರಿ ಗಣೇಶ ಹಬ್ಬಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ ಮೊಹರಂ ಹಬ್ಬದಲ್ಲಿ ತಾಬೂತುಗಳ ಪ್ರತಿಷ್ಠಾಪನೆ ಕೂಡ ನಿಷೇಧ ಹೇರಲಾಗಿದೆ. ಗಣೇಶಮೂರ್ತಿ ವಿಸರ್ಜನೆ  ಮೆರವಣಿಯಲ್ಲಿ  ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ.ಕೇಂದ್ರ ಸರ್ಕಾರದ ತೆರವು–3 ಮಾರ್ಗಸೂಚಿ ಆ. 31ರವರೆಗೆ ಇದ್ದು, ಈ ವೇಳೆ ಯಾವುದೇ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳಿಗೆ ಅವಕಾಶವಿಲ್ಲ. ಹೀಗಾಗಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮಗಳು ಹಾಗೂ ಡಿ.ಜೆ. ಸಿಸ್ಟಂ ಬಳಸುವಂತಿಲ್ಲ ಎಂದು ಸೂಚಿಸಿದ್ದಾರೆ.

davanagere ganesh uthsava dvgsuddi

ಜಿಲ್ಲೆಯಲ್ಲಿ 324 ಕಂಟೈನ್‌ಮೆಂಟ್ ವಲಯಗಳು ಇದ್ದು, ಬಂದೋಬಸ್ತ್‌ಗಾಗಿ ಈಗಾಗಲೇ ಗರಿಷ್ಠ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ.  ಹೆಚ್ಚುವರಿಯಾಗಿ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top