ಮೇ. 1 ರಿಂದ 10 ಕೆಜಿ ಅಕ್ಕಿ, 1 ಕೆಜಿ ಬೇಳೆ ವಿತರಿಸಲು ಸೂಚನೆ; ಸಂಸದ ಜಿ.ಎಂ  ಸಿದ್ದೇಶ್ವರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದ್ದು, ಮೇ1 ರಿಂದ ಪ್ರತಿ ಒಬ್ಬರಿಗೆ 10 ಕೆಜಿ ಅಕ್ಕಿ, 1 ಕೆಜಿ ಬೇಳೆ ಪಡಿತರ  ವಿತರಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ತಿಳಿಸಿದರು.

ಜಿಎಂಐಟಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ, 2 ಕೆಜಿ ಬೇಳೆ ವಿತರಿಸುವಂತೆ ಸೂಚಿಸಲಾಗಿತ್ತು. ಆದರೆ, ಬೇಳೆ ಕೊರತೆ ಹಿನ್ನೆಲೆ 1 ಕೆಜಿ ಬೇಳೆ, 10 ಕೆ.ಜಿ ಅಕ್ಕಿ ವಿತರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.ಜಿಲ್ಲೆಯಲ್ಲಿ 6.27 ಲಕ್ಷ ಜನಧನ್ ಖಾತೆಗಳಿದ್ದು, ಎಲ್ಲರ ಖಾತೆಗೆ 500 ರೂಪಾಯಿಯಂತೆ ಒಟ್ಟು 15.65 ಕೋಟಿ ಜಮೆ ಮಾಡಲಾಗಿದೆ.ಇನ್ನು ಪ್ರಧಾನಿ ಮಂತ್ರಿ ಉಜ್ವಾಲ ಯೋಜನೆ ಅಡಿಯಲ್ಲಿ 1.21 ಲಕ್ಷ ಫಲಾನುಭವಿಗಳಿದ್ದು, ಉಚಿತವಾಗಿ ಗ್ಯಾಸ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಇನ್ನು ಕೂಡ 49 ಸಾವಿರ ಜನ ಗ್ಯಾಸ್ ತುಂಬಿಸಿಕೊಂಡಿಲ್ಲ . ಕೂಡಲೇ ಸಾರ್ವಜನಿಕು ಗ್ಯಾಸ್ ಸಿಲಿಂಡ್ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕಿಸಾನ್ ಸಮ್ಮಾನ್ ಅಡಿಯಲ್ಲಿ 1.93 ಲಕ್ಷ ಖಾತೆದಾರರು ಹೊಂದಿದ್ದು, ಪ್ರತಿಯೊಬ್ಬರಿಗೆ 2 ಸಾವಿರದಂತೆ 1.65 ಲಕ್ಷ ಖಾತೆಗಳಿ ತುಂಬಲಾಗಿದ.ಇನ್ನುಳಿದವರು ಮೂಲ ದಾಖಲಾತಿ ನೀಡಿ ಹಣ ಜಮೆ ಮಾಡಿಸಿಕೊಳ್ಳಬಹುದು.

ಜಿಲ್ಲೆಯಲ್ಲಿ 83 ಸಾವಿರ ಕಾರ್ಮಿಕರಿಉ ನೋಂದಣಿ ಮಾಡಿಸಿಕೊಂಡಿದ್ದು, ಅವರಲ್ಲಿ 71 ಸಾವಿರ ಜನರಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗಿದೆ. ಇನ್ನುಳಿದವರು ದಾಖಲಾತಿ ನೀಡಿ ಹಣ ಜಮೆ ಮಾಡಿಸಿಕೊಳ್ಳಬಹುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *