Connect with us

Dvgsuddi Kannada | online news portal | Kannada news online

ಸೊಳ್ಳೆ ನಿಯಂತ್ರಣಕ್ಕೆ ಸ್ವಚ್ಛತೆ ಕಡೆ ಆದ್ಯತೆ ನೀಡಿ: ಡಾ.ಮೀನಾಕ್ಷಿ

ದಾವಣಗೆರೆ

ಸೊಳ್ಳೆ ನಿಯಂತ್ರಣಕ್ಕೆ ಸ್ವಚ್ಛತೆ ಕಡೆ ಆದ್ಯತೆ ನೀಡಿ: ಡಾ.ಮೀನಾಕ್ಷಿ

ಡಿವಿಜಿ ಸುದ್ದಿ, ದಾವಣಗೆರೆ: ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ ಕರೆ ನೀಡಿದರು.

ರೊನಾಲ್ಡ್ ರಾಸ್ ಅವರ ಸವಿನೆನಪಿಗಾಗಿ ಆಚರಿಸುವ ವಿಶ್ವ ಸೊಳ್ಳೆ ದಿನಾಚರಣೆ ಅಂಗವಾಗಿ ನಗರದ ಭಾರತ್ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತಮ್ಮ ಮನೆಯ ಸುತ್ತಲಿನ ಪರಿಸರದಲ್ಲಿರುವ ಘನತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆ ಆಗದಂತೆ ಜಾಗ್ರತೆ ವಹಿಸವುಂತೆ ತಿಳಿಸಿದರು.

ಈಗಾಗಲೇ ಅತೀ ಹೆಚ್ಚಾಗಿ ಮಳೆಗಾಲ ಪ್ರಾರಂಭವಾಗಿದ್ದು, ಡೆಂಗ್ಯೂಜ್ವರ, ಚಿಕೂನ್‍ಗುನ್ಯಾ ರೋಗಗಳನ್ನು ಹರಡುವ ಸೊಳ್ಳೆಗಳು ಹೆಚ್ಚಾಗಿ ನೀರಿನಲ್ಲಿ ಹುಟ್ಟುವುದರಿಂದ ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ ತಮ್ಮ ಮನೆಯ ನೀರಿನ ಎಲ್ಲಾ ಪರಿಕರಗಳನ್ನು ಕನಿಷ್ಠ ವಾರಕ್ಕೊಮ್ಮೆ ಚೆನ್ನಾಗಿ ತೊಳೆದು ನೀರು ತುಂಬಿ ಭದ್ರವಾಗಿ ಮುಚ್ಚಿಡಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ.ವೆಂಕಟೇಶ್ ಮಾತನಾಡಿ, ವಿಶ್ವ ಸೊಳ್ಳೆ ದಿನಾಚರಣೆಯನ್ನು ಪ್ರತಿ ವರ್ಷವೂ ಆಚರಿಸಲಾಗುತ್ತಿದ್ದು, ವಿವಿಧ ಜಾತಿಯ ಸೊಳ್ಳೆಗಳ ಬಗ್ಗೆ ಅವುಗಳ ಉತ್ಪತ್ತಿ ತಾಣಗಳ ಬಗ್ಗೆ ಹಾಗೂ ನಿಯಂತ್ರಣದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶ ಇದಾಗಿರುತ್ತದೆ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಎಚ್.ಉಮಾಪತಿ ಮಾತನಾಡಿ, ಸೊಳ್ಳೆಗಳ ನಿಯಂತ್ರಣದ ಜೊತೆಗೆ ಈ ವರ್ಷ ಹರಡಿರುವಂತಹ ಕೊರೊನಾ ರೋಗದ ಬಗ್ಗೆಯು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದ ಅವರು, ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಸುವುದು, ಜನಸಂದಣಿ ಪ್ರದೇಶಗಳಲ್ಲಿ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಅಗಿಂದಾಗ್ಗೆ ಕೈಗಳನ್ನು ತೊಳೆಯಬೇಕು. ಆ ಮೂಲಕ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ವಹಿಸುವುದರಿಂದ ಕೊರೊನಾ ಹೋಗಲಾಡಿಸಬಹುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಡೆಂಗ್ಯೂ, ಚಿಕೂನ್‍ಗುನ್ಯಾ, ಮಲೇರಿಯಾ ಕಾಯಿಲೆಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಸೊಳ್ಳೆಗಳ ನಿಯಂತ್ರÀಣಕ್ಕೆ ಸಾರ್ವಜನಿಕರು ಇನ್ನಷ್ಟು ಜಾಗೃತಿ ವಹಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಡಾ.ಸುನೀತಾ ಕೋಬಾಡೆ ದಗಡು, ತಾಲ್ಲೂಕು ಹಿರಿಯ ಪುರುಷ ಆರೋಗ್ಯ ಸಹಾಯಕರಾದ ವೆಂಕಟಾಚಲಾ ಕುಮಾರ, ಕಿರಿಯ ಪುರುಷ ಆರೋಗ್ಯ ಸಹಾಯಕ ಪ್ರಕಾಶ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top