Connect with us

Dvgsuddi Kannada | online news portal | Kannada news online

ಹೈಸ್ಕೂಲ್ ಮೈದಾನದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ವಿರೋಧ

ದಾವಣಗೆರೆ

ಹೈಸ್ಕೂಲ್ ಮೈದಾನದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ವಿರೋಧ

ಡಿವಿಜಿ ಸುದ್ದಿ, ದಾವಣಗೆರೆ : ನಗರದ ಹೈಸ್ಕೂಲ್ ಮೈದಾನದಲ್ಲ ಈಗಾಗಲೇ ತಾತ್ಕಾಲಿಕವಾಗಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಮಾಡಿದ್ದು, ಇದೀಗ ಅದೇ ರೀತಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಮಂದಾಗಿರುವ ಕ್ರಮಕ್ಕೆ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ದಿನೇಶ್ ಕೆ .ಶೆಟ್ಟಿ, ಹೈಸ್ಕೂಲ್ ಮೈದಾನದಲ್ಲಿ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡುವುದರಿಂದ ಕ್ರೀಡಾ ಪಟುಗಳಿಗೆ, ವಾಯು ವಿಹಾರಿಗಳಿಗೆ , ಹಿರಿಯ ನಾಗರಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.  ಆಟದ ಮೈದಾನದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡುವುದರಿಂದ ಪರಿಸರ ಮಾಲಿನ್ಯ ಉಂಟಾಗುವುದರ ಜೊತೆ ಕ್ರೀಡಾ ಪಟುಗಳಿಗೆ ಆಟ ಆಡಲು ಸ್ಥಳಾವಕಾಶ ಇಲ್ಲದಂತಾಗಿದೆ ಎಂದರು.

ನಗರ ಮಧ್ಯ ಭಾಗದಲ್ಲಿ ಇರುವ ಒಂದೇ ಒಂದು ಆಟದ ಮೈದಾನವನ್ನು ವಾಣಿಜ್ಯ ಉಪಯೋಗಕ್ಕಾಗಿ ಮತ್ತು ಬಸ್ ನಿಲ್ದಾಣಕ್ಕೆ ಉಪಯೋಗಿಸುವುದು ಸರಿಯಾದ ಕ್ರಮವಲ್ಲ.  ಈ ಕ್ರೀಡಾಂಗಣವನ್ನು ಕ್ರೀಡೆಗಳಿಗೆ ಮಾತ್ರ ಮೀಸಲಿಡಬೇಕು. ಕ್ರೀಡೆ ಬಿಟ್ಟು ಬೇರೆ ಉದ್ದೇಶಗಳಿಗೆ ಕ್ರೀಡಾಂಗ ಉಪಯೋಗಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.  ಇದಲ್ಲದೆ, ಬಸ್ ನಿಲ್ದಾಣ ವಿರೋಧಿಸಿ ಸಹಿ ಸಂಗ್ರಹ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರದ ಶ್ರೀಕಾಂತ್ ಬಗಾರೆ, ಶ್ರೀಕಾಂತ್ , ಹರೀಶ್ ಹಳ್ಳಿ, ಮಹಾವೀರ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top