ಡಿವಿಜಿ ಸುದ್ದಿ, ಹೊನ್ನಾಳಿ: ತೋಟಗಾರಿಕೆ ಇಲಾಖೆಯ ಇಬ್ಬರು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ, ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಅವರು ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಆದೇಶಿಸಿದ್ದಾರೆ.
ತೋಟಗಾರಿಕೆ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆ ಕಚೇರಿಗೆ ಭೇಟಿ ನೀಡಿದರು. ಬೆಳಗ್ಗೆ 11 ಘಂಟೆಯಾದರೂ ಅಧಿಕಾರಿಗಳು ಕಚೇರಿಗೆ ಬಾರದ ಹಿನ್ನೆಲೆ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು.
ಕಚೇರಿಯಲ್ಲಿ ಏಜೆಂಟರ್ ಗಳ ಹಾವಳಿ ಜಾಸ್ತಿಯಾಗಿದ್ದು ರೈತರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ಈ ಹಿನ್ನೆಲೆ ಖುದ್ದು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
https://www.facebook.com/MPRBJP/posts/2686750291567805



