Connect with us

Dvgsuddi Kannada | online news portal | Kannada news online

ವಿಡಿಯೋ: ಹೊನ್ನಾಳಿ ತೋಟಗಾರಿಕೆ ಇಲಾಖೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ದಿಢೀರ್ ಭೇಟಿ ; ಇಬ್ಬರು ಅಧಿಕಾರಿಗಳ ಅಮಾನತು

ವಿಡಿಯೋ

ವಿಡಿಯೋ: ಹೊನ್ನಾಳಿ ತೋಟಗಾರಿಕೆ ಇಲಾಖೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ದಿಢೀರ್ ಭೇಟಿ ; ಇಬ್ಬರು ಅಧಿಕಾರಿಗಳ ಅಮಾನತು

ಡಿವಿಜಿ ಸುದ್ದಿ, ಹೊನ್ನಾಳಿ:  ತೋಟಗಾರಿಕೆ ಇಲಾಖೆಯ ಇಬ್ಬರು  ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ, ಕಾರಣ ಕೇಳಿ  ನೋಟಿಸ್ ನೀಡಲಾಗಿತ್ತು. ಅವರು ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡುವಂತೆ  ಸಿಎಂ ರಾಜಕೀಯ ಕಾರ್ಯದರ್ಶಿ  ಎಂ.ಪಿ. ರೇಣುಕಾಚಾರ್ಯ ಆದೇಶಿಸಿದ್ದಾರೆ.

ತೋಟಗಾರಿಕೆ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆ ಕಚೇರಿಗೆ ಭೇಟಿ ನೀಡಿದರು. ಬೆಳಗ್ಗೆ 11 ಘಂಟೆಯಾದರೂ ಅಧಿಕಾರಿಗಳು ಕಚೇರಿಗೆ ಬಾರದ ಹಿನ್ನೆಲೆ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು.

ಕಚೇರಿಯಲ್ಲಿ ಏಜೆಂಟರ್ ಗಳ ಹಾವಳಿ ಜಾಸ್ತಿಯಾಗಿದ್ದು ರೈತರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ಈ ಹಿನ್ನೆಲೆ ಖುದ್ದು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ಹೊನ್ನಾಳಿಯ ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆ ಕಚೇರಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆನು.ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ…

Posted by M P Renukacharya on Monday, July 6, 2020

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ವಿಡಿಯೋ

To Top