Connect with us

Dvgsuddi Kannada | online news portal | Kannada news online

ನ್ಯಾಮತಿ: ಪಾರಂಪರಿಕ ಕೃಷಿ ವಿಕಾಸ ಯೋಜನೆ ಅನುಷ್ಠಾನ

ಪ್ರಮುಖ ಸುದ್ದಿ

ನ್ಯಾಮತಿ: ಪಾರಂಪರಿಕ ಕೃಷಿ ವಿಕಾಸ ಯೋಜನೆ ಅನುಷ್ಠಾನ

ಡಿವಿಜಿ ಸುದ್ದಿ, ನ್ಯಾಮತಿ: ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ನ್ಯಾಮತಿ ತಾಲ್ಲೂಕು ರಾಮೇಶ್ವರ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಪಾರಂಪರಿಕ ಕೃಷಿ ವಿಕಾಸ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಯೋಜನೆಯಡಿ 2020-21 ನೇ ವರ್ಷ ಚಟುವಟಿಕೆಗಳ ಪ್ರಾರಂಭಿಸಿದ್ದು ಸಾವಯವ ಪದ್ಧತಿಗಳಲ್ಲಿ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.  ಜೀವಾಮೃತ ತಯಾರಿಕೆ, ಎರೆಗೊಬ್ಬರ ತಯಾರಿಕೆ, ಹಸಿರೆಲೆಗೊಬ್ಬರ ಸಸಿಗಳನ್ನು ಬೆಳೆಯುವುದು ಮತ್ತು ಸ್ಥಳೀಯವಾಗಿ ದೊರೆಯುವ ಕೃಷಿ ತ್ಯಾಜ್ಯಗಳನ್ನು ಗೊಬ್ಬರವಾಗಿ ಪರಿವರ್ತಿಸಿ ಕೃಷಿಗೆ ಬಳಸುವ ಪ್ರಾತ್ಯಕ್ಷಿಕೆಗಳನ್ನು ಪ್ರಾರಂಭಿಸಲಾಗಿದೆ.ರೈತರು ಈ ಪದ್ಧತಿಗಳಿಂದ ವಿಷ ಮುಕ್ತ ಆಹಾರ ಬೆಳೆಗಳನ್ನು ಬೆಳೆಯುವುದರ ಜೊತೆಗೆ ರಾಸಾಯನಿಕ ಗೊಬ್ಬರದ ಖರ್ಚುನ್ನು ಕಡಿಮೆ ಮಾಡಬಹುದಾಗಿದೆ.

ಯೋಜನೆಯ ಅನುಷ್ಠಾನಗೊಳಿಸುತ್ತಿರುವ ವಿಜ್ಞಾನಿ ಶ್ರೀ ಬಸವನಗೌಡ ಎಂ.ಜಿ.  ಮಾತನಾಡಿ, ಪೂರ್ವಜರು ರಾಸಾಯನಿಕಗಳಿಲ್ಲದೆ ಸಾವಯವ ಪದ್ಧತಿಯಲ್ಲಿ ಪೋಷಕಾಂಶಗಳನ್ನು ನೀಡಿ ಆರೋಗ್ಯಕರ ಬೆಳೆಗಳನ್ನು ಬೆಳೆಯುತ್ತಿದ್ದರು ಮತ್ತು ಇಂತಹ ಯೋಜನೆಗಳಿಂದ ಉತ್ತಮ ಹಳೆಕಾಲದ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಅವಕಾಶ ದೊರೆತಿದೆ. ಸಾವಯವ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಬೆಲೆ ದೊರೆತರೆ ರೈತರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top