Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತೆಯಡಿ ತೊಗರಿ ಬೆಳೆ ಪ್ರಾತ್ಯಕ್ಷಿಕೆ

ಪ್ರಮುಖ ಸುದ್ದಿ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತೆಯಡಿ ತೊಗರಿ ಬೆಳೆ ಪ್ರಾತ್ಯಕ್ಷಿಕೆ

ಡಿವಿಜಿ ಸುದ್ದಿ, ದಾವಣಗೆರೆ: ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನ್ಯಾಮತಿ ತಾಲ್ಲೂಕು ರಾಮೇಶ್ವರ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ತೊಗರಿಯ ನವೀನ ತಳಿ ಬಿಆರ್‌ಜಿ- 5 ನ ಪ್ರಾತ್ಯಕ್ಷಿಕೆ ಆಯೋಜಿಸಲಾಗಿತ್ತು.

ಬೇಸಾಯ ಶಾಸ್ತ್ರಜ್ಞ ಮಲ್ಲಿಕಾರ್ಜುನ ಬಿ.ಓ. ಅವರು, ಪ್ರತಿ 6 ಸಾಲು ಮೆಕ್ಕೆಜೋಳದಲ್ಲಿ1 ಸಾಲು ತೊಗರಿ ಬೆಳೆಯುವುದರಿಂದ ಸೈನಿಕ ಹುಳು ಹತೋಟಿ ಮಾಡುವುದರ ಜೊತೆ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬಹುದಾಗಿದೆ ಎಂದು ರೈತರಿಗೆ ತಿಳಿಸಿದರು.

ಮಣ್ಣು ವಿಜ್ಞಾನಿಗಳಾದ ಶ್ರೀ ಹನುಮಂತನಗೌಡ್ರು ಮಾತನಾಡಿ,  ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಸಮತೋಲನದಲ್ಲಿ ಇಟ್ಟುಕೊಳ್ಳುವುದರ ಜೊತೆ ಖರ್ಚು ಕಡಿಮೆ ಮಾಡಲು ತಿಳಿಸಿದರು.  ಈ ಸಂದರ್ಭದಲ್ಲಿ ಪ್ರಗತಿ ಪರ ರೈತರಾದ  ಮಹೇಶ್ವರಪ್ಪ,  ಜಿ. ಮಲ್ಲಿಕಾರ್ಜುನಪ್ಪ,  ವಿರುಪಾಕ್ಷಪ್ಪ, ಗಂಗಾಧರಪ್ಪ ಮತ್ತು ಕೇಂದ್ರದ ವಿಸ್ತರಣಾ ತಜ್ಞ ರಘುರಾಜ ಜೆ. ರವರು ಉಪಸ್ಥಿತರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top