ಡಿವಿಜಿ ಸುದ್ದಿ, ಚನ್ನಗಿರಿ: ರೈತರು ಬದುಗಳಲ್ಲಿ ಹಾಗೂ ಅರಣ್ಯ ಇಲಾಖೆ ಕಾಡು ಪ್ರದೇಶದಲ್ಲಿ ಜೈವಿಕ ಇಂಧನ ಸಸಿಗಳಾದ ಹೊಂಗೆ, ಬೇವು, ಸಿಮರೂಬಾ ಮುಂತಾದವುಗಳನ್ನು ಬೆಳೆಯಲು ವಿಪುಲ ಅವಕಾಶಗಳಿವೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಹೇಳಿದರು.
ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆಯೋಜಿಸಿದ್ದ ಅಂತರರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೊಂಗೆ, ಬೇವು, ಸಿಮರೂಬಾ ಡಿಸೀಲ್ ತಯಾರಿಸಿಬಹದುದಾಗಿದೆ. ಕ್ಲಿಷ್ಟಕರ ಪರಿಸ್ಥಿತಿಗಳನ್ನು ಎದುರಿಸಲು ಅನುಕೂಲವಾಗುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ದೇವರಾಜ ಟಿ.ಎನ್, ಪ್ರಸ್ತುತವಿರುವ ಡಿಸೀಲ್ ಮುಗಿದು ಹೋಗುವ ಸಂಪನ್ಮೂಲವಾಗಿದ್ದು, ಪರ್ಯಾಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಪ್ರಾರಂಭಿಸಬೇಕು. ಅದರಲ್ಲಿ ಜೈವಿಕ ಇಂಧನ ಪ್ರಮುಖ ಪಾತ್ರವಹಿಸುತ್ತಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಡಿಜೇಲ್ ಯಂತ್ರಗಳಿಗೆ ಶೇ. 10 ರಷ್ಟು ಜೈವಿಕ ಇಂಧನ ಮಿಶ್ರ ಗೊಳಿಸಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಕ ರಾಜಣ್ಣ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಬಸವರಾಜಪ್ಪ, ಚನ್ನಗಿರಿ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಕಾಶ್, ಜಿಲ್ಲಾ ಪಂಚಾಯತ್ ಸದಸ್ಯ ಲೋಕೆಶಪ್ಪ ಹಾಗೂ ಸ್ಪೋರ್ತಿ ಸ್ವಯಂ ಸೇವಾ ಸಂಸ್ಥೆ ನಿರ್ದೇಶಕ ರೂಪಾನಾಯಕ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 1000 ಜೈವಿಕ ಇಂಧನ ಸಸಿಗಳಾದ ಹೊಂಗೆ ಮತ್ತು ಸಿಮರೂಬಾ ನೆಡಲಾಯಿತು.



