Connect with us

Dvgsuddi Kannada | online news portal | Kannada news online

ಬಡವರಿಗೆ ನೇರವಾಗಿ 10‌ ಸಾವಿರ ರೂಪಾಯಿ ಜಮೆ ಅಭಿಯಾನ : ಈಶ್ವರ್ ಖಂಡ್ರೆ

ಪ್ರಮುಖ ಸುದ್ದಿ

ಬಡವರಿಗೆ ನೇರವಾಗಿ 10‌ ಸಾವಿರ ರೂಪಾಯಿ ಜಮೆ ಅಭಿಯಾನ : ಈಶ್ವರ್ ಖಂಡ್ರೆ

ಡಿವಿಜಿ ಸುದ್ದಿ, ದಾವಣಗೆರೆ : ಇಡೀ ದೇಶದಲ್ಲಿ ಲಾಕ್ ಡೌನ್ ನಿಂದ ಬಡವರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ  ನೇರವಾಗಿ ಹತ್ತು ಸಾವಿರ ರೂಪಾಯಿ ಜಮೆ ಮಾಡುವಂತೆ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಆನ್ ಲೈನ್ ಅಭಿಯಾನ ಆರಂಭಿಸಿದೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಗತ್ತು ಕೊವಿಡ್ ನಿಂದ ತತ್ತರಿಸಿಹೋಗಿದೆ. ನಮ್ಮ ದೇಶದಲ್ಲೂ ಕೋವಿಡ್ -19 ವಿರುದ್ಧ ಎರಡು ತಿಂಗಳಿನಿಂದ ಲಾಕ್ ಡೌನ್ ಹೇರಲಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದೆ. ಆದರೆ, ಕೇಂದ್ರ ಸರ್ಕಾರ ಕೊವಿಡ್ ಬಗ್ಗೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಜನ ಸಂಕಷ್ಟ ಅನುಭವಿಸಿದ್ದಾರೆ. ವಲಸೆ ಕಾರ್ಮಿಕರು ಸಂಕಷ್ಟದಲ್ಲಿದ್ದು, ಅವರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದೇವೆ ಎಂದರು.

ಕೇಂದ್ರ ಸರ್ಕಾರ ಅನೇಕ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ, ಸ್ವರ್ಗ ತೋರಿಸಿ ಅಲ್ಲಿದೆ ತೆಗೆದುಕೊಳ್ಳಿ ಎಂದಿದ್ದಾರೆ. ನೇರವಾಗಿ ಬಡವರ ಖಾತೆಗೆ 10 ಸಾವಿರ ಹಣ ಜಮೆ ಮಾಡಬೇಕು ಎಂದು ಆಗ್ರಹಿಸಿದರು. ಜೂನ್ 7 ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top