ಡಿವಿಜಿ ಸುದ್ದಿ, ದಾವಣಗೆರೆ: ಶಿಷ್ಯ ವೇತನಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಜೆಜೆಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿಗೆ ಜೊತೆ ಮಾತುಕತೆ ನಡೆಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಜೆಜೆಎಂ ಮೆಡಿಕಲ್ ಕಾಲೇಜಿನ ವೈದ್ಯರಿಗೆ ಶಿಷ್ಯ ವೇತನವನ್ನು ಕಾಲೇಜಿನ ಆಡಳಿತ ಮಂಡಿಳಿಯವರೇ ಭರಿಸಬೇಕು. ಈ ನಿರ್ಧಾರವನ್ನು ಆಡಳಿತ ಮಂಡಳಿ ಸಭೆ ಕರೆದು ಸ್ಪಷ್ಟವಾಗಿ ತಿಳಿಸಿ ಎಂದು ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈಗಾಗಲೇ ಸಭೆ ನಡೆಸಿದ್ದು, ಶಿಷ್ಯವೇತನ ನೀಡುವ ಕುರಿತು ಆಡಳಿತ ಮಂಡಳಿ ಲಿಖಿತ ಆದೇಶ ನೀಡುವವರೆಗೂ, ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ಹೇಳಿದ್ದಾರೆ. ನಾಳೆಯೇ ಇನ್ನೊಮ್ಮೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.



