ಕೆರೆ ಸಂರಕ್ಷಣಾ ಸಮಿತಿ ರಚಿಸಲು ಆಗ್ರಹ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಕೆರೆಗಳ ಸಂರಕ್ಷಣೆ ಕೆರೆ ಸಂರಕ್ಷಣಾ ಸಮಿತಿ ರಚಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸರು ಸೇನೆ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಷ್ಟು ಕೆರೆಗಳಿವೆ. ಅವುಗಳ ವಿಸ್ತೀರ್ಣ ಎಷ್ಟು..? ಎಷ್ಟು ಕೆರೆ ಒತ್ತುವರಿಯಾಗಿವೆ..? ಎಷ್ಟು ಕೆರೆ ಹೂಳು ಎತ್ತಲಾಗಿದೆ  ಎಂಬ ಬಗ್ಗೆ ಜಿಲ್ಲಾ ಪಂಚಾಯತಿ, ಸಣ್ಣ ನೀರಾವರಿ ಇಲಾಖೆಗೆ ಮಾಹಿತಿ ಕೇಳಿದರೆ ಸಮರ್ಪಕವಾಗಿ ಮಾಹಿತಿ ನೀಡಿಲ್ಲ. ಹೀಗಾಗಿ ಆಯಾ ಕೆರೆಗಳ ಮುಂದೆ ಕೆರೆಯ ವಿಸ್ತೀರ್ಣ, ನೀರಿ ಮಟ್ಟ ಕುರಿತು ಮಾಹಿತಿ ಹೊಂದಿರುವ ನಾಮಫಲಕ ಹಾಕಬೇಕು.

ಇದಲ್ಲದೆ ಬೇಸಿಗೆಯಲ್ಲಿ ಕೆರೆಗಳ ಹೂಳು ತಗೆಸಿ, ಕೆರೆ ಒತ್ತುವರಿ ತೆರವುಗೊಳಿಸಬೇಕು. ಮಳೆಗಾಲದಲ್ಲಿ ಸಂಗ್ರಹವಾದ ನೀರನ್ನು ಸಂರಕ್ಷಿಸಲು ಸಂರಕ್ಷಣಾ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ನೀರಾವರಿ ನಿಗಮದ ಮೆಲೆಬೆನ್ನೂರು ಮತ್ತು ದಾವಣಗೆರೆ ವಿಭಾಗದಲ್ಲಿ ಅತಿದೊಡ್ಡ ಕೆರೆಗಳೆಂದರೆ ಶಾಂತಿ ಸಾಗರ ಮತ್ತು ದೇವರ ಬೆಳಕೆರೆ ಕೆರೆಗಳಾಗಿವೆ. ಇನ್ನುಳಿದ ಕೆರೆಗಳ ಬಗ್ಗೆ ಸಮರ್ಪಕ ಮಾಹಿತಿ ಇಲ್ಲ.ಇನ್ನು ಕೆರೆಗೆ ಭೂ ಸ್ವಾಧೀನವಾದ ಜಮೀನು ಸರ್ಕಾರಿ ಎಂದು ಬದಲಾವಣೆಯಾಗಿಲ್ಲ. ಆದರೆ, ಕೆಲವು ಜಮೀನುಗಳು ಮರು ಮಾರಾಟವಾಗಿವೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *