Connect with us

Dvgsuddi Kannada | online news portal | Kannada news online

ದಾವಣಗೆರೆ: ಬಡವರಿಗೆ ಹಂಚಲು ರೈತರಿಂದ 6 ಸಾವಿರ ಕೆಜಿ ತರಕಾರಿ ಖರೀದಿಸಿದ ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ

ಪ್ರಮುಖ ಸುದ್ದಿ

ದಾವಣಗೆರೆ: ಬಡವರಿಗೆ ಹಂಚಲು ರೈತರಿಂದ 6 ಸಾವಿರ ಕೆಜಿ ತರಕಾರಿ ಖರೀದಿಸಿದ ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ

ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ಬಡವರಿಗೆ ಹಂಚಲು ರೈತರಿಂದ ನೇರವಾಗಿ 6 ಸಾವಿರ ಕೆಜಿ ತರಕಾರಿಗಳನ್ನು ಕೆಪಿಸಿಸಿ ವಕ್ತಾರ ಕೊಂಡಜ್ಜಿ ಖರೀದಿ ಮಾಡಿದ್ದಾರೆ.

ಲಾಕ್ ಡೌನ್ ನಿಂದ ತರಕಾರಿಗಳಿಗೆ ಮಾರುಕಟ್ಟೆ ಇಲ್ಲದಿರುವುದರಿಂದ ರೈತರಿಂದ ನೇರವಾಗಿ ಖರೀದಿಸಿ ಬಡವರಿಗೆ ಹಂಚಲಿದ್ದಾರೆ. ಲಾಕ್ ಡೌನ್ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ ಬಹಳಷ್ಟು ತೊಂದರೆ ರೈತರು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಗಮನಿಸಿದ ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ, ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮ ಸುತ್ತಮುತ್ತಲಿನ ಬುಳ್ಳಾಪುರ, ಕೆಂಚನಹಳ್ಳಿ ಗ್ರಾಮದಲ್ಲಿ ರೈತರು ಬೆಳೆದ ತರಕಾರಿಗಳನ್ನು ನೇರವಾಗಿ ರೈತರ ಜಮೀನುಗಳಿಗೆ ಹೋಗಿ ಖರೀದಿಸಿದ್ದಾರೆ.

nikil kondajji2

ಈರುಳ್ಳಿ – 1500 ಕೆ ಜಿ , ಬದನೆಕಾಯಿ- 1500 ಕೆ ಜಿ , ಟೊಮೆಟೊ – 1500 ಕೆ ಜಿ , ಎಲೆ ಕೋಸು – 1500 ಕೆ ಜಿ ಸೇರಿದಂತೆ ಒಟ್ಟು 6000 ಕೆಜಿ ತರಕಾರಿಯನ್ನು ಖರೀದಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಸ್ಥಳೀಯವಾಗಿಯೇ ರೈತರಿಂದ ಅವರು ಬೆಳೆದ ತರಕಾರಿಗಳನ್ನು ಖರೀದಿ ಮಾಡಿ ಜನರಿಗೆ ಹಂಚಬೇಕು ಎನ್ನುವ ಸಂದೇಶವನ್ನು ಇವರು ಪಾಲಿಸಿದ್ದಾರೆ.

nikil kondajji 3

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top