ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಭೀತಿಯಿಂದ ಇಡೀ ದೇಶದಲ್ಲಿ ಲಾಕ್ ಡೌನ್ ಗೆ ಕರೆ ನೀಡಲಾಗಿದೆ. ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಅದರಲ್ಲೂ ಮದ್ಯ ಪ್ರಿಯರಿಗೆ ಸಂಕಷ್ಟ ಎದುರಾಗಿದೆ. ದೇಶದಲ್ಲಿ ಮದ್ಯ ಸಿಗದಕ್ಕೆ ಸಾವನ್ನಪ್ಪಿದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ದಾವಣಗೆರೆಯಲ್ಲಿಯೂ ಇಂತಹದ್ದೇ ಒಂದು ಪ್ರಕರಣ ಪತ್ತೆಯಾಗಿದ್ದು, ಮದ್ಯ ಸಿಗದಿದ್ದಕ್ಕೆ ಬೇಸತ್ತು ನೇಣು ಬಿಗುದುಕೊಂಡು ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.
ನಗರದ ಭರತ್ ಕಾಲೋನಿಯ ನಿವಾಸಿ ರವಿಚಂದ್ರ, (43) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೆಕಾನಿಕಲ್ ಕೆಲಸ ಮಾಡುತ್ತಿದ್ದ. ಬಾರ್ಗಳು ಬಂದ್ ಆಗಿದಾಗಿದ್ದರಿಂದ ಕಳೆದ ಹತ್ತು ದಿನಗಳಿಂದ ಮದ್ಯ ಸಿಗದೇ ಪರದಾಡುತ್ತಿದ್ದ.ಪ್ರತಿನಿತ್ಯ ಮದ್ಯ ಸೇವನೆ ಮಾಡಿಯೇ ಮನೆಗೆ ಬರುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಲಾಕ್ ಡೌನ್ ಬಳಿಕ ಎಲ್ಲಾ ಕಡೆ ಎಣ್ಣೆಗಾಗಿ ಪರದಾಡಿದ್ದು, ಎಲ್ಲಿಯೂ ಸಿಗದ ಹಿನ್ನೆಲೆಯಲ್ಲಿ ಬೇಸತ್ತು ಇಂದು ಬೆಳಗ್ಗೆ ನಿರ್ಜನ ಪ್ರದೇಶಕ್ಕೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ರವಿಚಂದ್ರಗೆ ಇಬ್ಬರು ಹೆಣ್ಣು ಮಕ್ಕಳಿದ್ದು, 12 ವರ್ಷದ ಗಂಡು ಮಗ ಇದ್ದಾನೆ.ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



