ಡಿವಿಜಿಸುದ್ದಿ.ಕಾಂ, ದಾವಣಗೆರೆ: ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ದುರಾಡಳಿತ, ವಿಳಂಬ ನೀತಿ, ಕಳಪೆ ಕಾಮಗಾರಿ, ಹಣ ದುರುಪಯೋಗ , ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸಲಾಗುತ್ತಿದೆಯಾ..? ಈ ಬಗ್ಗೆ ದೂರು ಸಲ್ಲಿಸುವುದು ಸುಲಭ.
ಹೌದು, ಸಾರ್ವಜನಿಕರು ನಿಮ್ಮ ಸುತ್ತಮುತ್ತ ಯಾವುದೇ ತರಹದ ಭ್ರಷ್ಟಾಚಾರ ನಡೆಯುತ್ತಿದ್ದರೆ, ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿಂದ ಅ. 15 ರಿಂದ 17 ರವರೆಗೆ ದಾವಣಗೆರೆಯಲ್ಲಿ ಜಿಲ್ಲಾ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದೆ. ಸೂಕ್ತ ದಾಖಲೆಗಳೊಂದಿಗೆ ದೂರು ದಾಖಲಿಸಬಹುದು.
ಅ.15, 16 ಮತ್ತು 17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಕ್ರಮವಾಗಿ ಹೊನ್ನಾಳಿ, ಚನ್ನಗಿರಿ, ನ್ಯಾಮತಿ, ಜಗಳೂರು ಪ್ರವಾಸಿ ಮಂದಿರಗಳಲ್ಲಿ ಟಿ.ಎಸ್.ಮುರುಗೇಶ್ ಹಾಗೂ ದ ಹರಿಹರ, ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಎಲ್.ಆರ್.ಲಕ್ಷ್ಮೀಪತಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಹೆಚ್ಚಿನ ಮಾಹಿತಿಗೆ: 08192-230164 ಗೆ ಸಂಪರ್ಕಿಸಬಹುದೆಂದು ಲೋಕಾಯುಕ್ತ ಪ್ರಭಾರ ಪೋಲಿಸ್ ಅಧೀಕ್ಷಕ ಕೆ.ಸಿ. ಪುರುಷೋತ್ತಮ್ ತಿಳಿಸಿದ್ದಾರೆ.



