Connect with us

Dvgsuddi Kannada | online news portal | Kannada news online

ಭೀಕರ ರಸ್ತೆ ಅಪಘಾತ; ಪಲ್ಟಿ ಹೊಡೆದ ಲಾರಿ: 3 ಮಹಿಳೆಯರು ಸ್ಥಳದಲ್ಲೇ ಸಾವು

ಪ್ರಮುಖ ಸುದ್ದಿ

ಭೀಕರ ರಸ್ತೆ ಅಪಘಾತ; ಪಲ್ಟಿ ಹೊಡೆದ ಲಾರಿ: 3 ಮಹಿಳೆಯರು ಸ್ಥಳದಲ್ಲೇ ಸಾವು

ಡಿವಿಜಿ ಸುದ್ದಿ, ಚನ್ನಗಿರಿ: ಮದುವೆ ಕಾರ್ಯಕ್ಕೆ ಆಂಧ್ರಪ್ರದೇಶದಿಂದ ಶಿಮೊಗ್ಗೆಕ್ಕೆ ಹೋಗುತ್ತಿದ್ದ  ಲಾರಿ,  ಚಾಲಕನ ನಿಯಂತ್ರಣ ತಪ್ಪಿ ಮೈಲುಗಲ್ಲಿಗೆ ಡಿಕ್ಕಿ ಹೊಡೆದು  ಪಲ್ಟಿಯಾದ ಘಟನೆ ಚನ್ನಗಿರಿಯಲ್ಲಿ ನೆಡೆದಿದೆ. ಸ್ಥಳದಲ್ಲಿಯೇ 3 ಮಹಿಳೆಯರು ಸಾವನ್ನಪ್ಪಿದ್ದು, 15 ಜನರಿಗೆ ಗಾಯವಾದ ಘಟನೆ  ತಾಲ್ಲೂಕಿನ ಮಾವಿನಕಟ್ಟೆ ಗ್ರಾಮದ ಬಳಿ ನಡೆದಿದೆ.

accident 2

ಚಾಲಕನ ನಿಯಂತ್ರಣ ತಪ್ಪಿತ ಲಾರಿ  ಮಾವಿಕಟ್ಟೆ ಗ್ರಾಮದ ಬಳಿ ಮೈಲುಗಲ್ಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಮದುವೆ ಕಾರ್ಯಕ್ಕೆ ಹೋಗುತ್ತಿದ್ದ ಮೂರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವರಲಕ್ಷ್ಮಿ (40), ಅನುಷಾ(38), ರತ್ಮಮ್ಮ(56) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

accident 3

ಸ್ಥಳಕ್ಕೆ ಚನ್ನಗಿರಿ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಗೆ ರಮಾನಿಸಲಾಗಿದೆ.  ಆಂಧ್ರಪ್ರದೇಶದದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿ ಹೋಗುತ್ತಿತ್ತು. ಆಂಧ್ರಪ್ರದೇಶದ ಹುಡುಗನ ಜೊತೆ ಶಿವಮೊಗ್ಗಾ ಹುಡುಗಿಯ ವಿವಾಹ ನಿಗದಿಯಾಗಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top