ಡಿವಿಜಿ ಸುದ್ದಿ, ದಾವಣಗೆರೆ: ವಿದ್ಯಾನಗರ 39ನೇ ವಾರ್ಡ್ ವ್ಯಾಪ್ತಿಯ ಮಾಗನೂರು ಬಸಪ್ಪ ಶಾಲೆಯ ಮತಗಟ್ಟೆಯಲ್ಲಿ ಮತದಾರರಿಗೆ ಕೈ ಚಿತ್ರದ ಸ್ಲಿಪ್ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ವಿದ್ಯಾನಗರ ವಾರ್ಡ್ ಬಿಜೆಪಿ ಅಭ್ಯರ್ಥಿ ಗೀತಾ ದಿಳ್ಯಪ್ಪ ಹಾಗೂ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ, ಹಸ್ತದ ಚಿತ್ರ ಇರುವ ಸ್ಲಿಪ್ ವಶಪಡಿಸಿಕೊಳ್ಳುವಂತೆ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದರು.ಈ ಬಗ್ಗೆ ಮತಗಟ್ಟೆ ಅಧಿಕಾರಿಗೆ ದೂರು ನೀಡಿದರು. ಇದಲ್ಲದೆ, ಈ ಬಗ್ಗೆ ಚುನಾವಣೆ ಆಯೋಗಕ್ಕೂ ದೂರು ದಾಖಲಿಸುವುದಾಗಿ ಲೋಕಿಕೆರೆ ನಾಗರಾಜ ತಿಳಿಸಿದರು.

ಈ ರೀತಿಯ ಸ್ಲಿಪ್ ತರುವವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಬಾರದು, ಚುನಾವಣಾ ಆಯೋಗ ನೀಡುವ ಸ್ಲಿಪ್ ತರುವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪಟ್ಟು ಹಿಡಿದರು. ಮತಗಟ್ಟೆ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದ್ರು.



