Connect with us

Dvgsuddi Kannada | online news portal | Kannada news online

ಕೈ ಗುರುತಿನ  ಸ್ಲಿಪ್‌ ಹಂಚಿಕೆ, ಬಿಜೆಪಿ ಮುಖಂಡರ ಆಕ್ಷೇಪ: ಚುನಾವಣೆ ಆಯೋಗಕ್ಕೆ ದೂರು ನೀಡಲು ಚಿಂತನೆ

ದಾವಣಗೆರೆ

ಕೈ ಗುರುತಿನ  ಸ್ಲಿಪ್‌ ಹಂಚಿಕೆ, ಬಿಜೆಪಿ ಮುಖಂಡರ ಆಕ್ಷೇಪ: ಚುನಾವಣೆ ಆಯೋಗಕ್ಕೆ ದೂರು ನೀಡಲು ಚಿಂತನೆ

ಡಿವಿಜಿ ಸುದ್ದಿ, ದಾವಣಗೆರೆ:  ವಿದ್ಯಾನಗರ 39ನೇ ವಾರ್ಡ್‌ ವ್ಯಾಪ್ತಿಯ ಮಾಗನೂರು ಬಸಪ್ಪ ಶಾಲೆಯ ಮತಗಟ್ಟೆಯಲ್ಲಿ ಮತದಾರರಿಗೆ ಕೈ ಚಿತ್ರದ ಸ್ಲಿಪ್ ನೀಡುತ್ತಿದ್ದಾರೆ ಎಂದು  ಆರೋಪಿಸಿ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ward 39 2

ವಿದ್ಯಾನಗರ ವಾರ್ಡ್ ಬಿಜೆಪಿ ಅಭ್ಯರ್ಥಿ ಗೀತಾ ದಿಳ್ಯಪ್ಪ ಹಾಗೂ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜು  ಸೇರಿದಂತೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ, ಹಸ್ತದ ಚಿತ್ರ ಇರುವ ಸ್ಲಿಪ್‌ ವಶಪಡಿಸಿಕೊಳ್ಳುವಂತೆ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದರು.ಈ ಬಗ್ಗೆ  ಮತಗಟ್ಟೆ ಅಧಿಕಾರಿಗೆ ದೂರು ನೀಡಿದರು. ಇದಲ್ಲದೆ, ಈ ಬಗ್ಗೆ ಚುನಾವಣೆ ಆಯೋಗಕ್ಕೂ ದೂರು ದಾಖಲಿಸುವುದಾಗಿ ಲೋಕಿಕೆರೆ ನಾಗರಾಜ ತಿಳಿಸಿದರು.

ward 39 3

ಈ ರೀತಿಯ ಸ್ಲಿಪ್‌ ತರುವವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಬಾರದು, ಚುನಾವಣಾ ಆಯೋಗ ನೀಡುವ ಸ್ಲಿಪ್‌ ತರುವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪಟ್ಟು ಹಿಡಿದರು. ಮತಗಟ್ಟೆ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದ್ರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top