Connect with us

Dvgsuddi Kannada | online news portal | Kannada news online

ಬಿಜೆಪಿ ವಿರುದ್ಧ ಸಿಡಿದೆದ್ದ ಮಾಜಿ ಜಿಲ್ಲಾಧ್ಯಕ್ಷ ಗುರು ಸಿದ್ದನಗೌಡ

ದಾವಣಗೆರೆ

ಬಿಜೆಪಿ ವಿರುದ್ಧ ಸಿಡಿದೆದ್ದ ಮಾಜಿ ಜಿಲ್ಲಾಧ್ಯಕ್ಷ ಗುರು ಸಿದ್ದನಗೌಡ

ಡಿವಿಜಿ ಸುದ್ದಿ, ದಾವಣಗೆರೆ:  ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮಾಜಿ ಜಿಲ್ಲಾಧ‍್ಯಕ್ಷ ಗುರು ಸಿದ್ಧನಗೌಡ ಬಿಜೆಪಿ ವಿರುದ್ಧ ಸಿಡಿದೆದ್ದು, ಬಿಜೆಪಿ ಬಂಡಾಯ ಅಭ್ಯರ್ಥಿಗಯಾಗಿ ಸೊಸೆಯನ್ನು ಕಣಕ್ಕೆ ಇಳಿಸಿದ್ದಾರೆ.

ಜಿಲ್ಲಾ ಬಿಜೆಪಿ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿರುವ ಗುರುಸಿದ್ದನಗೌಡ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಆದರೆ, ಸ್ಥಳೀಯ ನಾಯಕರು ಬಿಜೆಪಿಯ ಹಿರಿಯ ನಾಯಕರನ್ನು ಕಡೆಗಣಿಸುತ್ತಿದ್ದಾರೆ.

ನಾನು ಒಬ್ಬ ಮಾಜಿ  ಶಾಸಕ  ಇದ್ದೀನಿ, ಮೂರು ಸಲ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷನಾಗಿದ್ದೇನೆ.  ನನ್ನ ಸೊಸೆಗೆ ಒಂದು ಟಿಕೆಟ್ ಕೇಳಿದ್ದೆ, ಅದನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ನನ್ನ ಸೊಸೆ ಪ್ರೀತಿ ರವಿಕುಮಾರ್  ವಾರ್ಡ್ ನಂಬರ್ 42 ರಲ್ಲಿ ಚುನಾವಣೆ ಕಣಕ್ಕೆ ನಿಲ್ಲಿಸಿದ್ದೇನೆ.

ಚುನಾವಣೆಯಲ್ಲಿ ನಿಲ್ಲುವುದಕ್ಕಿಂತ ಮುನ್ನ ಕ್ಷೇತ್ರದ ಜನರ ಅಭಿಪಪ್ರಾಯ ಸಂಗ್ರಹಿಸಿ ಚುನಾವಣೆಗೆ ನಿಲ್ಲಿಸಿದ್ದೇನೆ. ಯಾವುದೇ   ಕಾರಣಕ್ಕೂ ನಾಮಪತ್ರ ವಾಪಾಸ್ಸು ತಗೆಯುವ ಪ್ರಶ್ನೆಯೇ ಇಲ್ಲ. ಮನವೊಲಿಕೆಗೆ ಬರುವುದಾದರೆ, ಚುನಾವಣೆ ಮುಗಿದ ಮೇಲೆ ಬರಲಿ ಎಂದರು.

ಬಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತ್  ರಾವ್  ಜಾಧವ್ ಮಾಗತನಾಡಿ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ    ಇಲ್ಲ.  ಎಲ್ಲೂ ಒಂದು ಎರಡು ಕಡೆ  ಭಿನ್ನಾಭಿಪ್ರಾಯ  ಇರಬಹುದು. ಅವರನ್ನು ಮನವೊಲಿಸುತ್ತೇವೆ ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top