ಡಿವಿಜಿ ಸುದ್ದಿ, ದಾವಣಗೆರೆ: ಜೆಜೆಎಂ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಾಲೇಜು ಆಡಳಿತ ಮಂಡಳಿಯೇ ಭರಸಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹೇಳಿದರು.
100 ಹಾಸಿಗೆಯ ಆಸ್ಪತ್ರಗೆ ಶಂಕು ಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಪ್ರತಿಭಟಟನಾ ನಿರತ ವೈದ್ಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ . ನಿನ್ನೆ ಈ ಕುರಿತು ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಸ್ಥಳೀಯ ಶಾಸಕರು, ಕಾಲೇಜಿನ ಅಧ್ಯಕ್ಷರು ಆದ ಶಾಮನೂರು ಶಿವಶಂಕರಪ್ಪ ಅವರ ಸಮ್ಮುಖದಲ್ಲಿ ನಾವು ಉನ್ನತ ಮಟ್ಟದ ಸಭೆಯನ್ನು ನಡೆದಿದೆ.

ಈ ಸಭೆಯಲ್ಲಿ ಇಡೀ ರಾಜ್ಯದಲ್ಲಿ ಆಯಾ ಕಾಲೇಜಿನ ಆಡಳಿತ ಮಂಡಳಿಯೇ ಶಿಷ್ಯವೇತನ ನೀಡುತ್ತಿವೆ. ಆದರೆ, ಇಲ್ಲಿ ಸರ್ಕಾರವೇ ಭರಿಸುವಂತೆ ಆಗ್ರಹಿಸುತ್ತಿದ್ದಾರೆ. ಇದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದು, ಶೀಘ್ರವೇ ಆಡಳಿತ ಮಂಡಳಿ ವೇತನ ಭರಿಸುವುದಾಗಿ ಒಪ್ಪಿಕೊಂಡಿದ್ದಾರೆ. ಸೋಮವಾರ ಶಿಷ್ಯವೇತನ ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಂದರು.



