ಅಧಿಕಾರಿಗಳ ಹಣ ವಸೂಲಿ ದಂಧೆ ತಪ್ಪಿಸಲು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ಎಸ್ .ಟಿ. ಸೋಮಶೇಖರ್  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ , ದಾವಣಗೆರೆ: ಕರ್ನಾಟಕ ಭೂ ಸುಧಾರಣಾ ಕಾಯ್ದೆಯಿಂದ ಯಾವುದೇ ಪ್ರಯೋಜನ ಇರಲಿಲ್ಲ.  ಇದರಿಂದ ಎಸಿ ಸೇರಿದಂತೆ ಇತರೆ  ಅಧಿಕಾರಿಗಳಿಗೆ  ಹಣ ವಸೂಲಿ ಮಾಡಿಕೊಳ್ಳುವ ದಂಧೆಯಾಗಿತ್ತು. ಹೀಗಾಗಿ ಕಾಯ್ದೆ ತಿದ್ದುಪಡಿ  ತರಲಾಗಿದೆ ಎಂದು  ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಹೇಳಿದರು.

ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಭೂ ಸುಧಾರಣೆ ಕಾಯ್ದೆ ಜಾರಿಗೆ ತರುವಂತೆ  ಜನರಿಂದ ದೂರು ಬಂದಿದ್ದವು. ಈ  ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಚರ್ಚಿಸಿ ತಿದ್ದುಪಡಿ ತರುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎಂ.ಟಿ.ಬಿ. ನಾಗರಾಜ್ ಜೊತೆ ಎಚ್‌.ವಿಶ್ವನಾಥ್, ಆರ್‌.ಶಂಕರ್ ಹಾಗೂ ರೋಷನ್‌ಬೇಗ್ ಅವರಿಗೂ  ಟಿಕೆಟ್ ನೀಡಬೇಕಿದೆ.

-ಸಚಿವ ಎಸ್‌.ಟಿ. ಸೋಮಶೇಖರ್

5 ಗುಂಟೆ ಜಮೀನು ಖರೀದಿ ಮಾಡಿದರೆ ಎರಡು ಮೂರು ತಿಂಗಳಲ್ಲಿ ನೋಟಿಸ್ ಕೊಡುತ್ತಿದ್ದರು. ಈ ಕಾಯ್ದೆ ಉಪಯೋಗವಿರಲಿಲ್ಲ. ಇದರಿಂದ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಮಾತನಾಡಿ, ನೆರೆಯ ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಸೇರಿದಂತೆ  ಯಾವ ರಾಜ್ಯದಲ್ಲೂ ಈ ಕಾಯ್ದೆ ಜಾರಿ ಇಲ್ಲ. ಹೀಗಾಗಿ ಕಾಯ್ದೆಗೆ ತಿದ್ದುಪಡಿ  ತರಲಾಗಿದೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *