ದಾವಣಗೆರೆ: ಎಸ್‍ಬಿಐ ಮೊಬೈಲ್ ಎಟಿಎಂಗೆ ಜಿಲ್ಲಾಧಿಕಾರಿ ಚಾಲನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣದ ಅಗತ್ಯತೆ ಪೂರೈಸುವ ದೃಷ್ಠಿಯಿಂದ  ಪಿ.ಬಿ. ಮುಖ್ಯ ರಸ್ತೆಯಲ್ಲಿರುವ ಎಸ್‍ಬಿಐ ಶಾಖೆಯ ವತಿಯಿಂದ ಸಂಚಾರಿ (ಮೊಬೈಲ್ ) ಎಟಿಎಂ ವಾಹನಕ್ಕೆ  ಜಿಲ್ಲಾಧಿಕಾರಿ ಮಾಹಂತೇಶ ಬೀಳಗಿ ಚಾಲನೆ ನೀಡಿದರು.

mobile atm davangere dvgsuddi 2

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಪರಿಣಾಮದಿಂದಾಗಿ ಸೀಲ್‍ಡೌನ್ ಪ್ರದೇಶಗಳಲ್ಲಿ ದೈನಂದಿನ ಹಣಕಾಸಿನ ವ್ಯವಹಾರಕ್ಕೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಸಂಚಾರಿ ಎಟಿಎಂಗೆ ಚಾಲನೆ ನೀಡಲಾಗಿದೆ. ರ

ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮೊಬೈಲ್ ಎಟಿಎಂಗೆ ಬಹಳಷ್ಟು ಬೇಡಿಕೆ ಇಟ್ಟಿದ್ದೆವು. ಇದೀಗ ಸೇವೆ ಒದಗಿದ್ದು, ಕಂಟೈನ್‍ಮೆಂಟ್ ಝೋನ್‍ಗಳಲ್ಲಿನ ಜನರಿಗೆ ಸಹಾಯವಾಗಲಿದೆ. ಇದರ ಮೂಲಕ ಜಿಲ್ಲೆಯ ಇತಿಹಾಸದಲ್ಲಿ ಈ ಸೇವೆ ಹೆಸರಾಗಲಿ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶುಭ ಹಾರೈಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಹಾಗೂ ಎಸ್‍ಬಿಐ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *