Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್‍ಬಿಐ ಮೊಬೈಲ್ ಎಟಿಎಂಗೆ ಜಿಲ್ಲಾಧಿಕಾರಿ ಚಾಲನೆ

ಪ್ರಮುಖ ಸುದ್ದಿ

ದಾವಣಗೆರೆ: ಎಸ್‍ಬಿಐ ಮೊಬೈಲ್ ಎಟಿಎಂಗೆ ಜಿಲ್ಲಾಧಿಕಾರಿ ಚಾಲನೆ

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣದ ಅಗತ್ಯತೆ ಪೂರೈಸುವ ದೃಷ್ಠಿಯಿಂದ  ಪಿ.ಬಿ. ಮುಖ್ಯ ರಸ್ತೆಯಲ್ಲಿರುವ ಎಸ್‍ಬಿಐ ಶಾಖೆಯ ವತಿಯಿಂದ ಸಂಚಾರಿ (ಮೊಬೈಲ್ ) ಎಟಿಎಂ ವಾಹನಕ್ಕೆ  ಜಿಲ್ಲಾಧಿಕಾರಿ ಮಾಹಂತೇಶ ಬೀಳಗಿ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಪರಿಣಾಮದಿಂದಾಗಿ ಸೀಲ್‍ಡೌನ್ ಪ್ರದೇಶಗಳಲ್ಲಿ ದೈನಂದಿನ ಹಣಕಾಸಿನ ವ್ಯವಹಾರಕ್ಕೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಸಂಚಾರಿ ಎಟಿಎಂಗೆ ಚಾಲನೆ ನೀಡಲಾಗಿದೆ. ರ

ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮೊಬೈಲ್ ಎಟಿಎಂಗೆ ಬಹಳಷ್ಟು ಬೇಡಿಕೆ ಇಟ್ಟಿದ್ದೆವು. ಇದೀಗ ಸೇವೆ ಒದಗಿದ್ದು, ಕಂಟೈನ್‍ಮೆಂಟ್ ಝೋನ್‍ಗಳಲ್ಲಿನ ಜನರಿಗೆ ಸಹಾಯವಾಗಲಿದೆ. ಇದರ ಮೂಲಕ ಜಿಲ್ಲೆಯ ಇತಿಹಾಸದಲ್ಲಿ ಈ ಸೇವೆ ಹೆಸರಾಗಲಿ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶುಭ ಹಾರೈಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಹಾಗೂ ಎಸ್‍ಬಿಐ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top