ಪ್ರತಿ ಗಂಟೆಗೆ 1,800 ದರದಲ್ಲಿಯೇ ಭತ್ತ ಕಟಾವು ಮಾಡಬೇಕು: ಸಂಸದ ಜಿ.ಎ. ಸಿದ್ದೇಶ್ವರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ; ಜಿಲ್ಲೆಯಲ್ಲಿ ಬೇಸಿಗೆ ಭತ್ತ ಕಟಾವಿಗೆ ಬಂದಿದ್ದು, ಲಾಕ್ ಡೌನ್ ಹಿನ್ನೆಲೆ  ರೈತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಈಗಾಗಲೇ ಜಿಲ್ಲಾಡಳಿತ ಭತ್ತ ಕಟಾವಿಗೆ ಪ್ರತಿ ಗಂಟೆಗೆ 1800 ರೂಪಾಯಿ ನಿಗದಿ ಮಾಡಿದೆ. ಯಂತ್ರಗಳ ಮಾಲೀಕರು ಜಿಲ್ಲಾಡಳಿತ ನಿಗದಿ ಮಾಡಿದ ದರದಲ್ಲಿಯೇ ಕಟಾವು ಮಾಡಬೇಕು ಎಂದು ಸಂಸದ ಜಿ.ಎ. ಸಿದ್ದೇಶ್ವರ್  ಸೂಚಿಸಿದರು.

ಕೃಷಿ ವಲಯದಲ್ಲಿ ಯಾವುದೇ ತೊಂದರೆ ನೀಡದಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಭತ್ತ ಕಟಾವಿಗೆ ,ಹೊರ ರಾಜ್ಯಗಳಿಂದ ಯಂತ್ರ ತರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ತಮಿಳುನಾಡು, ಆಂಧ್ರಪ್ರದೇಶ ದಿಂದ ಭತ್ತ ಕಟಾವು ಯಂತ್ರಗಳು ಜಿಲ್ಲೆಗೆ ಬಂದಿವೆ. ಕಳೆದ ಸಲ 2, 200 ರೂಪಾಯಿಯಂತೆ ಭತ್ತ ಕಟಾವು ಮಾಡಿರುವುದಾಗಿ ಮಾಲೀಕರು ಹೇಳಿದ್ದಾರೆ. ಆದರೆ, ಈಗ ಲಾಕ್ ಡೌನ್ ನಿಂದ ರೈತರ ಸಂಕಷ್ಟದಲ್ಲಿದ್ದು, ಪ್ರತಿ ಗಂಟೆಗೆ 1,800 ದರದಲ್ಲಿಯೇ ಕಟಾವು ಮಾಡುವಂತೆ ಆದೇಶಿಸಲಾಗಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *