ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ-ಹರಿಹರ ನಗಾರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ದಾವಣಗೆರೆ- ಬೀರೂರು-ಸಮ್ಮಸಗಿ ರಸ್ತೆಯಲ್ಲಿ ವಿವಿಧ ಕಾಮಗಾರಿಗಳಿಗೆ ಸಂಸದ ಜಿ.ಎಂ ಸಿದ್ದೇಶ್ವರ ಹಾಗೂ ಶಾಸಕರಾದ ಎಸ್.ಎ.ರವೀಂದ್ರನಾಥ್ ಇವರು ಗುದ್ದಲಿ ಪೂಜೆ ನೇರವೇರಿಸಿದರು.
ದೂಡಾ ಆಯುಕ್ತ ಬಿ.ಟಿ ಕುಮಾರಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಪಿ.ಬಿ ರಸ್ತೆ, ಬೀರೂರು ಸಮ್ಮಸಗಿ ರಸ್ತೆಯಲ್ಲಿ ರೂ.49 ಲಕ್ಷ ವೆಚ್ಚದಲ್ಲಿ ಹೊಸದಾಗಿ ಅಲಂಕಾರಿಕ ಕಂಬಗಳನ್ನು, ಹಾಗೂ 40 ಎಲ್.ಇ.ಡಿ ಬೀದಿ ದೀಪಗಳನ್ನು ಅಳವಡಿಸಲಾಗುವುದು. ಜಿಲ್ಲಾಧಿಕಾರಿ ಕಚೇರಿಯಿಂದ ಜಿ.ಎಂ.ಐ.ಟಿ ಕಾಲೇಜ್ ಮುಂಭಾಗದವರೆಗೆ ಕಾಮಗಾರಿ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಪ್ರೊ. ಲಿಂಗಣ್ಣ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಸದ್ಯಸ್ಯ ದೇವಿರಮ್ಮ, ಸೌಭಾಗ್ಯ ಮುಕುಂದ, ಡಿ.ಬಿ ಜಯರುದ್ರಪ್ಪ, ನಾಗರಾಜ್ ಎಂ, ಕಾರ್ಯಪಾಲಕ ಅಭಿಯಂತರ ಶ್ರೀಕರ್, ಅಭಿಯಂತರ ಸುಜಯ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.



