ಸಂಸದ ಅನಂತ ಕುಮಾರ್ ಹೆಗಡೆಯನ್ನು ಬಿಜೆಪಿಯಿಂದ ಉಚ್ಚಾಟಿಸಲಿ: ಡಿ.ಬಸವರಾಜ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ಷಾರವರಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಬಗ್ಗೆ ಗೌರವವಿದ್ದರೆ, ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತಕುಮಾರ್ ಹೆಗಡೆಯನ್ನು ಬಿಜೆಪಿಯಿಂದ ಉಚ್ಚಾಟಿಸಲಿ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ಆಗ್ರಹಿಸಿದರು.

ನಗರದ ದಾವಣಗೆರೆ ನಗರದ ನರಸರಾಜ ರಸ್ತೆಯಲ್ಲಿರುವ ಇಮಾಮ್ ಅಹ್ಮದ್ ರಜಾ ಉದ್ಯಾನ ವನದಲ್ಲಿ  ನಾವು ಭಾರತೀಯರು ಎಂಬ ಘೋಷಣೆಯೊಂದಿಗೆ   ಪ್ರಗತಿಪರ ಸಂಘಟನೆಗಳ  ನೇತೃತ್ವದಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್   ವಿರೋಧಿಸಿ ಶಾಹಿನ್‌ಬಾಗ್ ಬೆಂಬಲಿಸಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅನಂತಕುಮಾರ ಹೆಗಡೆಯನ್ನು ಬಿಜೆಪಿಯಿಂದ ಶಾಶ್ವತವಾಗಿ ಉಚ್ಚಾಟಿಸುವ ಮೂಲಕ ಗಾಂಧಿಯವರ ಬಗ್ಗೆ ಬಿಜೆಪಿಗೆ ಇರುವ ಗೌರವವನ್ನು ದೇಶದ ಮುಂದೆ ತೋರಿಸಲಿ ಎಂದು ಸವಾಲು ಹಾಕಿದರು. ಬಿದರ್‌ನ ಶಾಲೆಯಲ್ಲಿ ಸಿಎಎ ಬಗ್ಗೆ ಪ್ರದರ್ಶಿಸಿದ ನಾಟಕವೊಂದರಲ್ಲಿ ಒಂಭತ್ತು ವರ್ಷದ ಮಗುವೊಂದು ಆಡಿದ ಮಾತು     ಆ ಮಗುವಿನ ತಾಯಿ ಹಾಗೂ ಶಿಕ್ಷಕಿಯನ್ನು ದೇಶ ದ್ರೋಹದ ಆರೋಪದಡಿಯಲ್ಲಿ ಜೈಲಿಗೆ ಕಳುಹಿಸಲಾಗಿದೆ.   ಆದರೆ  ಸಿಎಎ  ಪ್ರತಿಭಟನಾಕಾರರಿಗೆ  ಗುಂಡಿಕ್ಕಲು  ಕರೆ  ನೀಡಿದ ಬಿಜೆಪಿ ಸಂಸದ ಅನುರಾಗ್‌ಠಾಕೂರ್, ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶ ಪ್ರೇಮಿ ಎಂದಿದ್ದ ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ಇವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದ ಮೋದಿ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ  ಎಂದರು.

ಸಂವಿಧಾನ ವಿರೋಧಿ ಕಾಯ್ದೆಗಳಾದ ಪೌರತ್ವ ತಿದ್ದುಪಡಿ ಕಾಯ್ದೆ, ಪ್ರಸ್ತಾವಿತ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ದೇಶದಲ್ಲಿ ಆರ್ಥಿಕ ಕುಸಿತ, ನಿರುದ್ಯೋಗ ಹೆಚ್ಚಳ, ಬೆಲೆ ಏರಿಕೆಯ ಬಗ್ಗೆ ಗಮನ ನೀಡದೇ ದೇಶದಲ್ಲಿ ಅಶಾಂತಿ ಸೃಷ್ಠಿಸಿ ಜನರ ಗಮನ ಬೇರೆಡೆ ಸೆಳೆಯಲು ಕರಾಳ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ ಎಂದು ಅವರು ಟೀಕಿಸಿದರು.

ಸಿಎಎ ಕಾಯ್ದೆಯಿಂದ ಕೇವಲ ಮುಸ್ಲಿಂರಿಗೆ ಮಾತ್ರ ತೊಂದರೆ ಆಗುವುದಿಲ್ಲ. ಈ ದೇಶದ ಮೂಲ ನಿವಾಸಿಗಳಾದ ದಲಿತರು, ಅಲೆಮಾರಿ ಜನಾಂಗದವರು ಮತ್ತು ಬುಡಕಟ್ಟು  ಜನರಿಗೆ  ತೀವ್ರ  ತೊಂದರೆ   ಆಗಲಿದೆ.  ಸಂವಿಧಾನ ವಿರೋಧಿ ಸಿಎಎ, ಎನ್‌ಆರ್‌ಸಿ ಮತ್ತು ಎಂಪಿಆರ್ ಕಾಯ್ದೆಗಳನ್ನು ಜಾರಿಗೊಳಿಸಲು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *