Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಪಾಲಿಕೆ ಸದಸ್ಯೆ ಯಶೋಧಮ್ಮ ರಾಜೀನಾಮೆಗೆ ವಾರ್ಡ್ ಕಾರ್ಯಕರ್ತರ ಆಗ್ರಹ  

ಪ್ರಮುಖ ಸುದ್ದಿ

ಕಾಂಗ್ರೆಸ್ ಪಾಲಿಕೆ ಸದಸ್ಯೆ ಯಶೋಧಮ್ಮ ರಾಜೀನಾಮೆಗೆ ವಾರ್ಡ್ ಕಾರ್ಯಕರ್ತರ ಆಗ್ರಹ  

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹವೆಸಗಿದ ಯಶೋಧ ಉಮೇಶ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಭರತ್ ಕಾಲೋನಿ ಮುಖಂಡರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಸಿ ನಟರಾಜ್, ನಿನ್ನೆಯ ಮೇಯರ್ ಚುನಾವಣೆಯಲ್ಲಿ ನಮ್ಮ ವಾರ್ಡ್ ಪ್ರತಿನಿಧಿಯಾಗಿ ಯಶೋಧಮ್ಮ ಉಮೇಶ್ ಮತದಾನ ಮಾಡಿಲ್ಲ. ಅವರ ಗೆಲುವಿಗೆ ನೂರಾರು ಕಾರ್ಯಕರ್ತರು ಕೆಲಸ ಮಾಡಿದ್ದೇವೆ. ಹಣದ ಆಮೀಷಕ್ಕೆ ಒಳಗಾಗಿ ಕ್ಷೇತ್ರದ ಮತದಾರಿಗೆ ದ್ರೋಹವೆಸಗಿದ್ದಾರೆ ಎಂದು ಆರೋಪಿಸಿದರು.

2600 ಮತಗಳ ಅಂತರದಿಂದ ಗೆಲ್ಲಿಸಿದ್ದೇವೆ. 30 ವರ್ಷದಿಂದ ದುಡಿದ ಕಾರ್ಯಕರ್ತರಿಗೆ ಟಿಕೆಟ್ ನೀಡದೆ, ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ನೀಡಲಾಗಿತ್ತು. ಆದರೂ ಸಹ ಪಕ್ಷಕ್ಕೆ ನಿಷ್ಠೆ ತೋರಿಸಲಿಲ್ಲ. ಪಕ್ಷಕ್ಕೆ ಮೋಸ ಮಾಡಿದ ಯಶೋಧಮ್ಮ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಅವರು ರಾಜೀನಾಮೆ ಕೊಡದಿದ್ದರೆ, ಉಗ್ರ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಜಿಲ್ಲಾ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಶಿವಕುಮಾರ್, ರಂಗನಾಥ್, ಎಂ.ಶಂಕರ್ ಅಲೆಗ್ಸಾಂಡರ್ ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top