ಡಿವಿಜಿ ಸುದ್ದಿ,ದಾವಣಗೆರೆ: ಮೌನೇಶ್ವರ, ಜಯನಗರ ಫೀಡರ್ ಮತ್ತು ಇಎಸ್ಐ ಫೀಡರ್ ಹಾಗೂ ಎಸ್ ವಿಟಿ ಫೀಡರ್ಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ಒಳಚರಂಡಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಸೆ.25) ವಿದ್ಯುತ್ ವ್ಯತ್ಯಯವಾಗಲಿದೆ.
ಮೌನೇಶ್ವರ ಫೀಡರ್ನ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು ಮತ್ತು ಜಯನಗರ ಫೀಡರ್ ವ್ಯಾಪ್ತಿಯ ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಸುತ್ತ ಮುತ್ತಲಿನ ಪ್ರದೇಶಗಳು ಇ.ಎಸ್.ಐ ಫೀಡರ್ನ ವ್ಯಾಪ್ತಿಯ ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು ಹಾಗೂ ಎಸ್.ವಿ.ಟಿ ಫೀಡರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಂ.ಸಿ.ಸಿ.ಬಿ ಬ್ಲಾಕ್, ಡೆಂಟಲ್ ಕಾಲೇಜ್ ರಸ್ತೆ, ಆಂಜನೇಯ ಬಡಾವಣೆ 1,2 ಮತ್ತು 3ನೇ ಕ್ರಾಸ್, ಬಿ.ಡಿ.ಟಿ. ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಮೀಣ ಉಪವಿಭಾಗದ ಘಟಕ-01 ಶಾಖೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ನಾಳೆ ಬೆಳಿಗ್ಗೆ 10 ರಿಂದ ಸಂಜೆ 06.30 ರವರೆಗೆ ಜೆ.ಹೆಚ್.ಪಿ. ಬಡಾವಣೆ, ಶಾಮನೂರು, ಶಿವ ಪಾರ್ವತಿ ಬಡಾವಣೆ, ನಾಗನೂರು ರಸ್ತೆ, ಡಾಲರ್ಸ್ ಕಾಲೋನಿ, ಬನಶಂಕರಿ ಬಡಾವಣೆ, ಜರೀಕಟ್ಟೆ ಮತ್ತು ಮುದಹದಡಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



