ಡಿವಿಜಿ ಸುದ್ದಿ, ದಾವಣಗೆರೆ: ಎಂ.ಸಿ.ಸಿ.ಬಿ 11 ಕೆ.ವಿ. ಫೀಡರ್ನಲ್ಲಿ ಜಲಸಿರಿ ಕಾಮಗಾರಿ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಂ.ಸಿ.ಸಿ.ಬಿ ಫೀಡರ್ನ ವ್ಯಾಪ್ತಿಯ ಲಕ್ಷ್ಮಿ ಫ್ಲೋರ್ ಮಿಲ್, ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ ಬಿ.ಐ.ಇ.ಟಿ. ಕಾಲೇಜು, ಗುಂಡಿ ಛತ್ರದ ಸುತ್ತ ಮುತ್ತ, ಸದ್ಯೋಜಾತ ಮಠದ ಸುತ್ತಮುತ್ತ, ಕಾಸಲ್ ಶೆಟ್ಟಿ ಪಾರ್ಕ್ ಶಾಮನೂರು ಶಿವಶಂಕರಪ್ಪರವರ ನಿವಾಸದ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



