Connect with us

Dvgsuddi Kannada | online news portal | Kannada news online

ಗ್ರಾಮೀಣ ಮಕ್ಕಳ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ:ಎಸ್.ಎ.ರವೀಂದ್ರನಾಥ್

ದಾವಣಗೆರೆ

ಗ್ರಾಮೀಣ ಮಕ್ಕಳ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ:ಎಸ್.ಎ.ರವೀಂದ್ರನಾಥ್

ಡಿವಿಜಿ ಸುದ್ದಿ, ದಾವಣಗೆರೆ: ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕೆಂದು  ಶಾಸಕ ಎಸ್.ಎ. ರವೀಂದ್ರನಾಥ ಹೇಳಿದರು.

ನಗರದ ಸೋಮೇಶ್ವರ ವಿದ್ಯಾಲಯದಲ್ಲಿ ಆಯೋಜಿಸಿದ್ದ 2019-20ನೇ ಸಾಲಿನ ಬ್ಲಾಕ್ ಹಂತದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಗಳಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲಾಗುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂತಹ ಅವಕಾಶಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಸಹಕಾರಿಯಾಗಲಿದೆ. ವಿವಿಧ ಸಾಂಸ್ಕಂತಿಕ ಕಾರ್ಯಕ್ರಮಗಳು ಮತ್ತು ವೇಷ ಭೂಷಣ ಸ್ಪರ್ಧೆಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವ ಕೆಲಸ ಶಿಕ್ಷಕರಿಂದ ಆಗಬೇಕುರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಜಿಲ್ಲೆಯ ಮಕ್ಕಳು ಭಾಗವಹಿಸಿ ಬಹುಮಾನ ಪಡೆದು ನಮ್ಮ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಮಾತನಾಡಿ, ಪ್ರತಿಯೊಂದು ಮಗುವು ತನ್ನದೇ ಆದ ಪ್ರತಿಭೆಯನ್ನು ಹೊಂದಿರುತ್ತದೆ. ಇದನ್ನು ಗುರುತಿಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ತೊಡಗಬೇಕು. ಹುಟ್ಟಿದ ಎಲ್ಲಾ ಮಕ್ಕಳು ಡಾಕ್ಟರ್ ಮತ್ತು ಎಂಜಿನಿಯರ್‍ಗಳಾಗಲು ಸಾಧ್ಯವಿಲ್ಲ. ಪ್ರತಿಯೊಂದು ಮಗುವು ಕಲೆ. ಸಂಗೀತ ಮತ್ತು ಚಿತ್ರಕಲೆ ಇಂತಹ ವಿಭಿನ್ನ ಕಲೆಗಳನ್ನು ಹೊಂದಿರುತ್ತದೆ ಇದನ್ನು ನಾವು ಪ್ರೋತ್ಸಾಹಿಸಿದಾಗ ಮಕ್ಕಳಲ್ಲಿನ  ಪ್ರತಿಭೆ ಹೊರಹೊಮ್ಮಲಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಪಠ್ಯದ ಜೊತೆಗೆ ಮಕ್ಕಳು ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಬೇಕು. ಅದೃಷ್ಟ ಮತ್ತು ಸಾಧನೆ ನಮ್ಮನ್ನು ಉತ್ತುಂಗ ಸ್ಥಾನಕ್ಕೆ ಏರಿಸುತ್ತದೆ. ಮಕ್ಕಳು ಪರಿಶ್ರಮ ವಹಿಸಿದರೆ ಆ ಸ್ಥಾನ ಮುಂದುವರಿಯುತ್ತದೆ. ಆದ್ದರಿಂದ ಮಕ್ಕಳು ಹೆಚ್ಚಿನ ಪರಿಶ್ರಮ ವಹಿಸಬೇಕು ಎಂದ ಅವರು ಇದೇ ಸಂದರ್ಭದಲ್ಲಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುವ ಎಲ್ಲ ಮಕ್ಕಳಿಗೂ ಮತ್ತು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದ ಪೋಷಕರು, ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಶೈಲಜಾ ಬಸವರಾಜ್, ಜಿ.ಪಂ. ಸದಸ್ಯ ಹದಡಿ ನಿಂಗಪ್ಪ, ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷೆ ಮಮತ ಮಲ್ಲೇಶಪ್ಪ, ಸೋಮೇಶ್ವರ ವಿದ್ಯಾಲಯ ಕಾರ್ಯದರ್ಶಿ ಸುರೇಶ್, ಪಾಲಿಕೆ ಸದಸ್ಯರಾದ ಕೆ.ಎಂ ವೀರೇಶ್, ಎಸ್.ಮಂಜುನಾಥ್, ಉಮಾ ಪ್ರಕಾಶ್, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಮರುಳಪ್ಪ, ಸಂಘದ ಕಾರ್ಯದರ್ಶಿ ಬಿ.ಎಂ. ಚೌಡಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಲಿಂಗಪ್ಪ, ಉಪಾಧ್ಯಕ್ಷ ಆರ್.ಜಿ. ಅಜ್ಜಯ್ಯ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಈಶಾನಾಯ್ಕ, ಕಾರ್ಯದರ್ಶಿ ಶ್ರೀನಿವಾಸ್, ಪರಿಶಿಷ್ಟ ಜಾತಿ ಮತ್ತು ಪಂಗಡದ ಜಿಲ್ಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಗದಿಗೆಪ್ಪ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರಪ್ಪ, ಕಾರ್ಯದರ್ಶಿ ಪಂಚಾಕ್ಷರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜ್ಜಯ್ಯ, ಕ್ಷೇತ್ರ ಸಮನ್ವಯಾಧಿಕಾರಿ ಉಮಾದೇವಿ ಉಪಸ್ಥಿತರಿದ್ದರು.

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top