Connect with us

Dvgsuddi Kannada | online news portal | Kannada news online

ಕೇಂದ್ರ ಸರ್ಕಾರದ ನೀತಿ ವಿರೋಧಿ ವಿವಿಧ ಕಾರ್ಮಿಕ ಸಂಘಟನೆಯಿಂದ ಮುಷ್ಕರ

ದಾವಣಗೆರೆ

ಕೇಂದ್ರ ಸರ್ಕಾರದ ನೀತಿ ವಿರೋಧಿ ವಿವಿಧ ಕಾರ್ಮಿಕ ಸಂಘಟನೆಯಿಂದ ಮುಷ್ಕರ

ಡಿವಿಜಿ ಸುದ್ದಿ, ದಾವಣಗೆರೆ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ವಿವಿಧ ಸಂಘಟನೆಗಳು ದಾವಣಗೆರೆಯ ಜಯದೇವ ವೃತ್ತದಿಂದ ಗಡಿಯಾರ ಕಂಬದವರೆಗೆ ಪ್ರತಿಭನಾ ಮೆರವಣಿಗೆ ನಡೆಸಿದರು.

ಸಾರ್ವಜನಿಕರಿಗೆ ತಟ್ಟದ ಮುಷ್ಕರ ಬಿಸಿ: ದೇಶದಾದ್ಯಂತ ಕರೆ ನೀಡಿದ್ದ ಮುಷ್ಕರ ಹಿನ್ನೆಲೆ ದಾವಣಗೆರೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಶಾಲಾ, ಕಾಲೇಜ್, ಸರ್ಕಾರಿ ಕಚೇರಿಗಳಿಗೆ ರಜೆ ಇಲ್ಲದ ಹಿನ್ನೆಲೆಯಲ್ಲಿ ಜನ ಜೀವನ ಎಂದಿನಂತೆ ಸಾಗಿತ್ತು. ಹೊಟೇಲ್, ಚಲನಚಿತ್ರ ಮಂದಿರ, ಆಸ್ಪತ್ರೆ, ಆಟೋ, ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿರಲಿಲ್ಲ.

ಎಐಟಿಯುಸಿ, ಸಿಐಟಿಯುಸಿ, ಕಟ್ಟಡ ಕಲ್ಲು ಕ್ವಾರಿ ಕಾರ್ಮಿಕ ಸಂಘ,  ಕರ್ನಾಟಕ ರಾಜ್ಯ ರೈತ ಸಂಘ, ಶ್ರೀ ಆಂಜನೇಯ ಕಾಟನ್ ಮಿಲ್ ಯೂನಿಯನ್, ಕರ್ನಾಟಕ ಶ್ರಮಿಕ ಶಕ್ತಿ ಮತ್ತು ಬೀಡಿ ಕಾರ್ಮಿಕ ಯೂನಿಯನ್ ಸೇರಿದಂತೆ ಅನೇಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು. ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರ  ಆರ್ಥಿಕ ನೀತಿ, ಕಾರ್ಮಿಕರ ವೇತನ ಹೆಚ್ಚಳ, ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಿಲ್ಲಿಸಬೇಕು, ರೈಲ್ವೆ, ಬಿಎಸ್ ಎನ್ ಎಲ್ ಖಾಸಗಿಕರಣಕ್ಕೆ ಅವಕಾಶ ಕಲ್ಪಿಸಬಾರದು, ಬೆಲೆ ಏರಿಕೆ ಕಡಿವಾಣ ಹಾಕಬೇಕು, ರೈತರಿಗೆ ಬೆಳೆಗೆ ನ್ಯಾಯಯುತ ಬೆಲೆ ನಿಗದಿಗೆ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ದೇಶದ ಐಕ್ಯತೆಗೆ ಕಾಪಡುವ ದೃಷ್ಟಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸು ಪಡೆಯಬೇಕು. ಜೆಎನ್ ಯು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸುವುದಾಗಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಕೆ. ರಾಮಚಂದ್ರಪ್ಪ ಆಗ್ರಹಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top