ಡಿವಿಜಿ ಸುದ್ದಿ, ದಾವಣಗೆರೆ: ಜೆಎನ್ ಯು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಜಯದೇವ ಸರ್ಕಲ್ ಬಳಿ ಎನ್ಎಸ್ ಯುಐ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಜಿಲ್ಲಾ ಎನ್ಎಸ್ ಯು ಐ ಅಧ್ಯಕ್ಷ ಅಲಿ ರಹಮತ್ ಪೈಲ್ವಾನ್ , ಉಪಾಧ್ಯಕ್ಷ ನೂರ್ ಮಹ್ಮದ್ ,ಗಿರಿಧರ್, ವಯಾಜ್, ಸಾಗರ್ ಸೇರಿದಂತೆ ಎಂಎಸ್ ಬಿ ಕಾಲೇಜ್ ವಿದ್ಯಾರ್ಥಿಗಳು ಭಾಗಿಯಾಗಿದ್ದರು.



