Connect with us

Dvgsuddi Kannada | online news portal | Kannada news online

ಸರ್ಕಾರದ ವಿರುದ್ಧ ಹೋದ್ರೆ ನಮ್ಮ ಕೆಲಸ ಆಗಲ್ಲ: ಶಾಮನೂರು ಶಿವಶಂರಪ್ಪ

ಪ್ರಮುಖ ಸುದ್ದಿ

ಸರ್ಕಾರದ ವಿರುದ್ಧ ಹೋದ್ರೆ ನಮ್ಮ ಕೆಲಸ ಆಗಲ್ಲ: ಶಾಮನೂರು ಶಿವಶಂರಪ್ಪ

ಡಿವಿಜಿ ಸುದ್ದಿ, ಹರಿಹರ: ಸರ್ಕಾರ ವಿರುದ್ದ ಹೋದರೆ ನಮ್ಮ ಕೆಲಸಗಳು ಆಗಲ್ಲ. ಅವರ‌‌ ಬೆನ್ನುತಟ್ಟಿ ಅವರ ಜೊತೆ ಹೋಗ‌ಬೇಕು ಎಂದು ಮಾಜಿ ಸಚಿವ , ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದರು.

ದಾವಣಗೆರೆ ಜಿಲ್ಲೆ ಹರಿಹರದ ಪಂಚಮಸಾಲಿ ಪೀಠದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ನಮ್ಮವರು. ಮಠಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಆದ್ರೆ, ಮಠಗಳು ಎಷ್ಟರ ಮಟ್ಟಿಗೆ ಅಭಿವೃದ್ಧಿ ಯಾಗಿವೆ ಎನ್ನುವುದು ಗೊತ್ತಿಲ್ಲ. ನಮ್ಮ ಜಿಲ್ಲೆಗೆ ನಮ್ಮ ಸಮುದಾಯದ ಅಧಿಕಾರಿಗಳನ್ನು ಯಡಿಯೂರಪ್ಪ ‌ನೀಡಿದ್ದಾರೆ.
ಸಿದ್ದರಾಮಯ್ಯ ಸಿಎಂ ಇದ್ದಾಗ ಬರೀ ಕುರುಬರೇ ಇದ್ದರು  ಎಂದರು.

ವೀರಶೈವ – ಲಿಂಗಾಯತ ಎನ್ನುವುದು ಶಮನ ಮಾಡೋದು ಹೇಗೆ ಎಂದು ಗೊತ್ತಾಗುತ್ತಿಲ್ಲ. ಯಡಿಯೂರಪ್ಪ ನನ್ನ‌ ಬೆನ್ನುತಟ್ಟಿ ನಾನಿದ್ದೇನೆ ಎಂದಿದ್ದಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಮುಂದುವರೆಯುತ್ತಿದ್ದಾನೆ. ರೈಲು ಬಹಳ ಸ್ಪೀಡಾಗಿ ಹೋಗ ಬರದು. ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿಗಳು ಬಹಳ ವೇಗವಾಗಿ ಹೋಗುತ್ತಿದ್ದಾರೆ. ಅದಕ್ಕೆ ಬ್ರೇಕ್ ಹಾಕಿ, ಸಮಾಜ ಅಭಿವೃದ್ದಿಗೆ ಕ್ರಮ ಕೈಗೊಳ್ಳಿ ಎಂದು ವಚನಾನಂದ ಸ್ವಾಮಿ ಅವರಿಗೆ ಸಲಹೆ ನೀಡಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top