Connect with us

Dvgsuddi Kannada | online news portal | Kannada news online

ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ದೇವರ 58ನೇ ರಥೋತ್ಸವ ರದ್ದು

ದಾವಣಗೆರೆ

ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ದೇವರ 58ನೇ ರಥೋತ್ಸವ ರದ್ದು

ಡಿವಿಜಿ ಸುದ್ದಿ, ದಾವಣಗೆರೆ: ಶ್ರೀ  ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠ ದಾವಣಗೆರೆ ಶಾಖೆ ವತಿಯಿಂದ ಪ್ರತಿವರ್ಷ ಶ್ರಾವಣದ ಮೊದಲನೇ ಸೋಮವಾರ ಜರುಗುವ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ದೇವರ 58ನೇ ರಥೋತ್ಸವ ಹಾಗೂ ಲಿಂಗೈಕ್ಯ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಅವರ  18ನೇ ಸ್ಮರಣೋತ್ಸವವನ್ನು ರದ್ದುಗೊಳಿಸಿದೆ.

ಜಗತ್ತಿನಾದ್ಯಂತ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು,  ದಾವಣಗೆರೆಯೂ ಇದಕ್ಕೆ ಹೊರತಾಗಿಲ್ಲ.  ದಾವಣಗೆರೆಯ ನಗರದ ಶ್ರೀಮಠದ ಸುತ್ತ ಕೆಲವೊಂದು ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಹೀಗಾಗಿ ಭಕ್ತರ ಜೀವ-ಕ್ಷೇಮ-ಅಭಿವೃದ್ಧಿ ಬಯಸುವುದು ಮಠದ ಮೂಲದ್ದೇಶವಾಗಿದೆ. ಈ ಕಾರಣ 27 ಜುಲೈ ರಂದು ಜರುಗಬೇಕಿದ್ದ ರಥೋತ್ಸವವನ್ನು ರದ್ದುಗೊಳಿಸಿದೆ. ಸದ್ಭಕ್ತರು ಮನೆಯಲ್ಲಿದ್ದು ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ವಚನ ವಂದನೆ ಸಲ್ಲಿಸಿ ಕೃಪಾಶೀರ್ವಾದ ಪಡೆಯಲು  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top